Breaking News

ಮೋದಿ ಅವರಿಗೆ ನಾವು ಬೀಳ್ಕೊಡುಗೆ ನೀಡುತ್ತೇವೆ : ಲಾಲು ಪ್ರಸಾದ್ ಯಾದವ್

Spread the love

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನಾವು ಬೀಳ್ಕೊಡುಗೆ ನೀಡುತ್ತೇವೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಅನಾರೋಗ್ಯದ ನಡುವೆಯೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಖಾಸಗಿ ಹೋಟೆಲ್‍ನ ಸಭೆಯಲ್ಲಿ ತಮ್ಮ ಪುತ್ರರೂ ಆದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗೆ ಭಾಗವಹಿಸಿದ್ದ ಅವರು, ಪ್ರಧಾನಮಂತ್ರಿಯವರಿಗೆ ನಾವು ಬೀಳ್ಕೊಡುಗೆ ನೀಡುತ್ತೇವೆ ಎಂದಿದ್ದಾರೆ.

 

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಈ ಸಭೆ ಅಗತ್ಯವಿದೆ. ಪ್ರಧಾನಮಂತ್ರಿಯವರ ಶಾಸನಗಳು ಜನರಿಗೆ ಮಾರಕವಾಗಿದೆ. ರೈತರು, ಕಾರ್ಮಿಕರು, ಯುವಜನರಿಗೆ ರಕ್ಷಣೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಸಭೆ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ನಂತರ ಹಿರಿಯ ನಾಯಕರ ಜೊತೆ ನಿಂತು ಫೊಟೋ ತೆಗೆಸಿಕೊಂಡು ಸಭೆಗೆ ತೆರಳಿದ್ದಾರೆ. ಪ್ರತೀ ಹಂತದಲ್ಲೂ ಲಾಲು ಪ್ರಸಾದ್ ಯಾದವ್ ಅಂತು ಗಮನ ಸೆಳೆಯುವುದು ಸಾಮಾನ್ಯವಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ