Breaking News

ಉತ್ತರ ಕನ್ನಡದಲ್ಲಿ ಆರ್ಭಟಿಸುತ್ತಿದ್ದ ಮಳೆ

Spread the love

ಕಾರವಾರ : ಉತ್ತರ ಕನ್ನಡದಲ್ಲಿ ಆರ್ಭಟಿಸುತ್ತಿದ್ದ ಮಳೆ ಕಡಿಮೆಯಾಗಿದ್ದು, ನದಿ ತೀರಗಳಲ್ಲಿ ಪ್ರವಾಹ ಇಳಿಕೆಯಾಗುತ್ತಿರುವ ಕಾರಣ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ, ಈ ನಡುವೆ ಜಿಲ್ಲೆಯಲ್ಲಿ ನಡೆದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯಲ್ಲಿ ಜಿಲ್ಲೆಯ 439 ಪ್ರದೇಶಗಳಲ್ಲಿ ಭೂ ಕುಸಿತವಾಗುವ ಬಗ್ಗೆ ಮುನ್ನೆಚ್ಚರಿಕಾ ವರದಿಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ.

ಬಹುಪಾಲು ಅರಣ್ಯ ಪ್ರದೇಶವನ್ನೇ ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ. ಅದರಲ್ಲಿಯೂ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಪ್ರವಾಹ ಸೃಷ್ಟಿಯಾಗುತ್ತಿರುವುದು ಪ್ರತಿ ಮಳೆಗಾಲದ ವೇಳೆ ಜಿಲ್ಲೆಯ ಜನ ಆತಂಕದಲ್ಲಿ ಕಾಲ ಕಳೆಯಬೇಕಾದ ಸ್ಥಿತಿ ಇದೆ. ಇದರ ನಡುವೆ ಇದೀಗ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ 439 ಸ್ಥಳಗಳಲ್ಲಿ ಗುಡ್ಡ ಕುಸಿತವಾಗುವ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ನೀಡಿದ ವರದಿಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಇದು ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ನಿದ್ದೆಗೆಡಿಸುವಂತೆ ಮಾಡಿದೆ.

 


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ