Breaking News

ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ

Spread the love

ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ.

ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ (ತಿದ್ದುಪಡಿ) ಮಸೂದೆ 2023 ಮತ್ತು ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ 2023 ಅನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ವಕೀಲರ (ತಿದ್ದುಪಡಿ) ಮಸೂದೆ: ಮಣಿಪುರ ಜನಾಂಗೀಯ ಹಿಂಸಾಚಾರದ ಕುರಿತು ನಿಯಮ 267ರ ಅಡಿಯಲ್ಲಿ ವಿಸ್ತೃತ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸೃಷ್ಟಿಸಿದ ಗದ್ದಲದಿಂದಾಗಿ ಈ ಆರು ಮಸೂದೆಗಳಲ್ಲಿ ಕೆಲವನ್ನು ಮಂಗಳವಾರದ ಕಲಾಪದಲ್ಲಿ ಸೇರಿಸಲಾಗಿದೆ. ಮಣಿಪುರ ಹಿಂಸಾಚಾರದ ವಿಷಯವಾಗಿ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಷಣದ ಬೇಡಿಕೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ರಾಜ್ಯಸಭೆಯಲ್ಲಿ ವಕೀಲರ ಕಾಯಿದೆ-1961 ಅನ್ನು ತಿದ್ದುಪಡಿ ಮಾಡಲು ವಕೀಲರ (ತಿದ್ದುಪಡಿ) ಮಸೂದೆ-2023 ಅನ್ನು ಮಂಡಿಸಲಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ