Breaking News

ರಾಜ್ಯ ಸ್ಟಾರ್ಟ್ ಅಪ್ ಸಂಸ್ಥೆಗಳ ಸಮಸ್ಯೆ, ಬೇಡಿಕೆ ಅರಿಯಲು ಸರ್ವೆಗೆ ಮುಂದಾದ ಐಟಿಬಿಟಿ…ಪ್ರಿಯಾಂಕ್ ಖರ್ಗೆ

Spread the love

ಬೆಂಗಳೂರು: ಐಟಿಬಿಟಿ ಇಲಾಖೆ ರಾಜ್ಯದ ಎಲ್ಲಾ ಸ್ಟಾರ್ಟ್ ಅಪ್ ಸಂಸ್ಥೆಗಳ ಸಮಸ್ಯೆ, ಬೇಡಿಕೆಗಳನ್ನು ತಿಳಿದುಕೊಳ್ಳಲು ಸರ್ವೆ ಮಾಡಲು ಮುಂದಾಗಿದೆ.

ಆ​ನ್​ಲೈನ್ ಮೂಲಕ ಸರ್ವೆ ಕಾರ್ಯ ನಡೆಸಲಿರುವ ಐಟಿಬಿಟಿ ಇಲಾಖೆ ರಾಜ್ಯದ ನೋಂದಾಯಿತ ಎಲ್ಲಾ ಸ್ಟಾರ್ಟ್ ಅಪ್ ಸಂಸ್ಥೆಗಳ ಅಹವಾಲು, ಸಮಸ್ಯೆ, ಬೇಡಿಕೆ, ಅಗತ್ಯಗಳನ್ನು ಆಲಿಸಲಿದೆ. ಈ ಸಂಬಂಧ ಐಟಿ ಹಾಗೂ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

ತಮ್ಮ ಅಗತ್ಯತೆಗಳನ್ನು ತಿಳಿದುಕೊಳ್ಳುವ ಸಲುವಾಗಿ ಐಟಿಬಿಟಿ ಇಲಾಖೆ ಸರ್ವೆಯನ್ನು ಕೈಗೊಳ್ಳುತ್ತಿದೆ. ಸರ್ವೆಯಲ್ಲಿ ಒಟ್ಟು ಗೂಡಿಸಿದ ಅಭಿಪ್ರಾಯಗಳ ಆಧಾರದಲ್ಲಿ ತಮಗೆ ತಕ್ಕಂತೆ ಕಾರ್ಯಕ್ರಮಗಳು, ಕಾರ್ಯಾಗಾರಗಳನ್ನು ರೂಪಿಸಲಿದ್ದೇವೆ. ಆ ಮೂಲಕ ರಾಜ್ಯದ ಸ್ಟಾರ್ಟ್ ಅಪ್ ಸಮುದಾಯಕ್ಕೆ ಪ್ರೋತ್ಸಾಹ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

 

 

ಆಯ್ದ ಕ್ಷೇತ್ರವಾರು ಸ್ಟಾರ್ಟ್ ಅಪ್​ಗಳು ಸರ್ಕಾರದ ಮುಕ್ತ ಚರ್ಚಾ ವೇದಿಕೆಯಲ್ಲೂ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, docs.google.com/forms/d/e/1FAI ಸರ್ವೆ ಲಿಂಕ್​ನ್ನು ಪೋಸ್ಟ್ ಮಾಡಿದ್ದಾರೆ. ಆಗಸ್ಟ್ 9 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಈ ಸರ್ವೆ ಲಿಂಕ್‌ನಲ್ಲಿ ಸ್ಟಾರ್ಟ್ ಅಪ್ ಸಂಸ್ಥೆಗಳ ಹೆಸರು, ವಿಳಾಸ, ನೋಂದಣಿ ಸಂಖ್ಯೆ, ಮೊಬೈಲ್ ನಂಬರ್, ಇ-ಮೇಲ್​ ಐಡಿಯನ್ನು ನಮೂದಿಸಬೇಕು. ಸರ್ವೆ ಪೇಜ್​ನಲ್ಲಿ ಸ್ಟಾರ್ಟ್ ಅಪ್​ಗಳು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿವೆ. ಸದ್ಯ ಸಂಸ್ಥೆಯ ಪ್ರಗತಿ ಹಂತ 2022-23 ನಲ್ಲಿ ಆದಾಯ, ಬಂಡವಾಳ ಹೂಡಿಕೆಯಾಗಿದೆಯಾ ಎಂಬ ಬಗ್ಗೆ ಕೆಲ ಅಗತ್ಯ ಮಾಹಿತಿಗಳನ್ನು ಕೇಳಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ