Breaking News

ನಿಗಮ ಮಂಡಳಿ ನೇಮಕಕ್ಕೆ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Spread the love

ಮಂಗಳೂರು: ನಿಗಮ ಮಂಡಳಿ ನೇಮಕಕ್ಕೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿಯಲ್ಲಿ ಶಾಸಕರನ್ನು ಸೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು ದೆಹಲಿ ಸಭೆಗೂ ಶಾಸಕರ ಸಭೆಗೂ ಲಿಂಕ್ ಮಾಡುವುದು ಬೇಡ. ಶಾಸಕರ ಸಭೆಯಲ್ಲಿ ಶಾಸಕರು ಕ್ಷೇತ್ರದ ಸಮಸ್ಯೆ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬುಧವಾರ ದೆಹಲಿಯಲ್ಲಿ ಕರೆದಿದ್ದು ಲೀಡರ್​ಗಳ ಸಭೆ. ದೆಹಲಿಯಲ್ಲಿ ಪಾರ್ಲಿಮೆಂಟ್ ಎಲೆಕ್ಷನ್ ಬಗ್ಗೆ ಚರ್ಚೆ ಮಾಡಲು ಸಭೆ ಕರೆದಿದ್ದಾರೆ. 37 ಜನ ಸೀನಿಯರ್ ಲೀಡರ್​ಗಳ ಸಭೆ ಕರೆದಿದ್ದಾರೆ. ಇದರಲ್ಲಿ ಜಗದೀಶ್ ಶೆಟ್ಟರ್ ಕೂಡ ಒಬ್ಬರು. ಕ್ಯಾಂಡಿಡೇಟ್ ಬಗ್ಗೆ ಚರ್ಚೆ ಮಾಡಿಲ್ಲ. ಕೇವಲ ಚುನಾವಣೆ ಬಗ್ಗೆ ಚರ್ಚೆ ಅಷ್ಟೇ ಎಂದರು. ಇನ್ನು ಸಿಎಂ ಆದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿಲ್ಲ. ಕಳೆದ ಬಾರಿ ದೆಹಲಿಗೆ ಹೋದಾಗ ಅವರು ವಿದೇಶಕ್ಕೆ ಹೋಗಿದ್ದರು. ಈ ಬಾರಿ ಅವರ ಭೇಟಿಗೆ ಸಮಯ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ, ರೂಟ್​ಗಳಿಗೆ ಬಸ್ ಅಗತ್ಯವಿದೆಯೋ ಅಲ್ಲಿ ಹೊಸ ಬಸ್ ಆರಂಭಿಸುವ ಚಿಂತನೆ ಇದೆ. ಇದಕ್ಕಾಗಿ ಹೊಸ ಬಸ್ ತೆಗೆದುಕೊಳ್ಳಲು ತೀರ್ಮಾನ ಮಾಡಿದ್ದೇವೆ. ಇಂದಿರಾ ಕ್ಯಾಂಟೀನ್ ಯಾವುದೇ ಬಾಕಿ ಇದ್ದರೂ ಚುಕ್ತಾ ಮಾಡುತ್ತೇವೆ. ಬಾಕಿ ಇದ್ದರೆ ನಮಗೆ ಹೇಳಲಿ, ಕೊಡುತ್ತೇವೆ ಎಂದು ಸಿಎಂ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ವೀಕ್ ಇಲ್ಲ. ರಾಜ್ಯದಲ್ಲಿ ಶೇ. 42.9 ರಷ್ಟು ಮತ ಪಡೆದಿದ್ದೇವೆ. ಬಿಜೆಪಿ ಪಡೆದದ್ದು ಶೇ.36 ರಷ್ಟು. ಅವರಿಗಿಂತ ಶೇ. 6 ರಷ್ಟು ಮತಗಳನ್ನು ಹೆಚ್ಚು ಪಡೆದಿದ್ದೇವೆ. ಕೇಂದ್ರದಲ್ಲಿ ಅಧಿಕಾರ ಮಾಡುವ ಪಕ್ಷ 8 ಜಿಲ್ಲೆಗಳಲ್ಲಿ ಶೂನ್ಯ ಸ್ಥಾನ ಪಡೆದಿದೆ ಎಂದರು. ಇನ್ನು ಚುನಾವಣೆ ವೇಳೆ ಕರಾವಳಿಗೆ ಘೋಷಿಸಲಾದ ಹತ್ತು ಘೋಷಣೆ ಜಾರಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ ಗೊತ್ತಿಲ್ಲ. ಪರಮೇಶ್ವರ್ ಜೊತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಇನ್ನು ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕಸ್ತೂರಿ ರಂಗನ್ ವರದಿಯನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಭರವಸೆ ನೀಡಿದರು.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ