Home / ರಾಜಕೀಯ / ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ.

Spread the love

ಚಿಕ್ಕಮಗಳೂರು: ರಾಜ್ಯದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಬಂದು ಹೋಗಲಷ್ಟೇ ಸ್ವರ್ಗವೆನಿಸುತ್ತದೆ.

ಆದರೆ, ಇಲ್ಲಿ ನೆಲೆಗೊಂಡು ಜೀವನ ಮಾಡುವವರಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗತೊಡಗಿದೆ. ಮೂಡಿಗೆರೆಯ ಒಂದೇ ಕಾಫಿ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಒಂದು ವಾರದಿಂದ ಬೀಡು ಬಿಟ್ಟಿದ್ದು, ಎಲಿಫ್ಯಾಂಟ್‌ ಟಾಸ್ಕ್‌ ಫೋರ್ಸ್‌ನ ಆನೆ ಓಡಿಸುವ ಪ್ರಯತ್ನ ಸಂಪೂರ್ಣ ವ್ಯರ್ಥವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳು ಹಾಗೂ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಾಡಾನೆಗಳು ಪದೇ ಪದೆ ದಾಳಿ ನಡೆಸುತ್ತಿದ್ದು, ಇಲ್ಲಿನ ರೈತರು, ಜನರು ಆತಂಕದಿಂದ ಜೀವನ ಸಾಗಿಸುವಂತಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು ಕಾಫಿ, ಅಡಿಕೆ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲದೇ ಇದರಿಂದ ರೈತರು ಆತಂಕದಿಂದ ಬದುಕುವಂತಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಜಿ. ಹೊಸಳ್ಳಿ ಗ್ರಾಮದಲ್ಲಿರುವ ಟಾಟಾ ಎಸ್ಟೇಟ್​ನಲ್ಲಿ ಆನೆಗಳು ಬೀಡು ಬಿಟ್ಟಿವೆ. ಒಂದಲ್ಲ ಎರಡಲ್ಲ ಬರೋಬ್ಬರಿ 16 ಕಾಡಾನೆಗಳು ಎಸ್ಟೇಟ್​ನ ತೋಟದಲ್ಲಿ ಸಾಲಾಗಿ ಸಾಗುವ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಕಳೆದ ಅನೇಕ ದಿನಗಳಿಂದ ಜಿ. ಹೊಸಳ್ಳಿ, ಅರೇಹಳ್ಳಿ, ಚೀಕನಹಳ್ಳಿ, ಮಾಕೋನಹಳ್ಳಿ, ಮಲಸಾವರ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಕಾಡಾನೆಗಳು ಸುತ್ತು ಹೊಡೆಯುತ್ತಿವೆ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ