Breaking News

ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್​ನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Spread the love

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒಂದೇ‌ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಆಂಧ್ರ ಮೂಲದ ವಿರಾರ್ಜುನ (31), ಪತ್ನಿ ಹೇಮಾವತಿ (29), ಒಂದೂವರೆ ವರ್ಷದ ಹಾಗೂ 8 ತಿಂಗಳ ಮಕ್ಕಳು ಸಾವನ್ನಪ್ಪಿದವರು. ಜುಲೈ 31ರಂದು ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿನ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ಅನುಮಾನಗೊಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಬಾಗಿಲು ಒಡೆದು ಒಳಗೆ ಹೋಗಿ ಪರಿಶೀಲಿಸಿದಾಗ ನಾಲ್ವರು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿ ನೀಡಿದ ಮಾಹಿತಿ ಎಫ್​ಎಸ್‌ಎಲ್ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ.‌ ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.‌ ಈ ಸಂಬಂಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ