Breaking News

ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾನವೀಯತೆ ಮೆರೆದಿದ್ದಾರೆ.

Spread the love

ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ.

ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ.

ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ತಮ್ಮ ಜೀವನೋಪಾಯಕ್ಕೆ ಆಸರೆ ಒದಗಿಸಲು ಮನವಿ ಮಾಡಿಕೊಂಡಾಗ, ಖುದ್ದು ಜಿಲ್ಲಾಧಿಕಾರಿಗಳು ಅವರ ದೂರು ಆಲಿಸಿ ಸ್ಥಳದಲ್ಲಿಯೇ ಬಡ ವೃದ್ಧ ದಂಪತಿಗೆ ಪಿಂಚಣಿ ಮಂಜೂರು ಮಾಡಿಸುವ ಮೂಲಕ ಮಾನವೀಯತೆ ಮೆರೆದರು.

“ಸರ್ಕಾರದ ಪಿಂಚಣಿ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಜಿಲ್ಲೆಯ ಯಾವುದೇ ಫಲಾನುಭವಿಗಳು ಕಚೇರಿಗಳಿಗೆ ಅಲೆದಾಡುವಂತಾಗಬಾರದು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಿ ಅರ್ಹ ಫಲಾನುಭವಿಗಳಿಗೆ ಹಾಗೂ ಅವಶ್ಯಕತೆ ಇರುವವರಿಗೆ ಸರ್ಕಾರದ ಸೌಲಭ್ಯಗಳು ದೊರಕಿಸಲು ಕ್ರಮ ವಹಿಸುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿವಿಧ ಪಿಂಚಣಿ ಯೋಜನೆಗಳಾಗಿ ಅರ್ಹರು ತಾಲೂಕು ತಹಶೀಲ್ದಾರ್​ ಅವರನ್ನು ಸಂಪರ್ಕಿಸಬೇಕು. ಜಿಲ್ಲಾದ್ಯಂತ ಪಿಂಚಣಿ ಅದಾಲತ್‍ಗಳನ್ನು ಆಯೋಜಿಸುವ ಮೂಲಕ ಅರ್ಹರಿಗೆ ಸೌಲಭ್ಯ ದೊರಕಿಸಲು ಪ್ರಯತ್ನಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್
ತಿಳಿಸಿದ್ದಾರೆ.


Spread the love

About Laxminews 24x7

Check Also

ಪುಲ್ವಾಮಾ ದಾಳಿಗೆ 7 ವರ್ಷ

Spread the loveಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ