ಮುಂಬೈ ಪೊಲೀಸರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ರೈಲುಗಳಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ.

Spread the love

ಮುಂಬೈ(ಮಹಾರಾಷ್ಟ್ರ) : ಗೃಹ ಸಚಿವ ಅಮಿತ್​ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ.

ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು, ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಶೋಕ್​ ಮುಖಿಯಾ ಎಂದು ಗುರುತಿಸಲಾಗಿದೆ. ಬೆದರಿಕೆ ಹಾಕಿದ್ದರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇಂದು ಬೆಳಗ್ಗೆ ಆರೋಪಿ ಮುಂಬೈ ಪೊಲೀಸ್​ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಲೋಕಲ್​ ಟ್ರೈನ್​ಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ. ಪೊಲೀಸರು ಯಾವ ರೈಲು, ಸ್ಥಳ ಎಂಬ ಬಗ್ಗೆ ಮಾಹಿತಿ ಕೇಳಿದಾಗ, ಕಾಲ್ ಕಟ್​ ಮಾಡಿದ್ದ. ಬಳಿಕ ಮೊಬೈಲ್​ ಸ್ವಿಚ್​ ಆಫ್​ ಮಾಡಿಕೊಂಡಿದ್ದ. ಆತಂಕದ ವಾತಾವರಣ ಉಂಟಾದ ಬಳಿಕ ತಕ್ಷಣವೇ ಎಚ್ಚೆತ್ತ ಪೊಲೀಸರು ಕಾರ್ಯಾಚರಣೆಗೆ ಇಳಿದರು.

ಆರೋಪಿಯ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದ್ದಾರೆ. ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಯಿತು.

ಆರೋಪಿ ಅರೆಸ್ಟ್​; ಇನ್ನು, ಫೋನ್​ ಕರೆ ಬಂದ ಮಾಹಿತಿ ಆಧಾರದ ಅನ್ವಯ ಕಾಲ್​ ಟ್ರ್ಯಾಕ್​ ಮಾಡಿ ಆರೋಪಿ ಮುಖಿಯಾ ಎಂಬಾತನನ್ನು ಬಂಧಿಸಿದ್ದಾರೆ. ಈತ ಯಾಕಾಗಿ ಬೆದರಿಕೆ ಹಾಕಿದ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಮಗ್ರ ತನಿಖೆಯ ಬಳಿಕವೇ ಸತ್ಯ ಹೊರಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ