Breaking News

ನಾನು ಕಮಿಷನ್ ಕೇಳಿದರೆ, ಇವತ್ತೇ ನಿವೃತ್ತಿಯಾಗುವೆ,

Spread the love

ಬೆಂಗಳೂರು: ನಾನು ಏನಾದರೂ ಕಮಿಷನ್ ಕೇಳಿದ್ರೆ, ಇವತ್ತೇ ರಾಜಕೀಯದಿಂದ ನಿವೃತ್ತಿ ಆಗುವೆ. ಬಸವರಾಜ ಬೊಮ್ಮಾಯಿ ಆಗ್ತಾರಾ? ಅಥವಾ ಆರ್​ ಅಶೋಕ್​ ಅವರು ನಿವೃತ್ತಿ ಆಗ್ತಾರಾ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸುದ್ದಿಗೋಷ್ಠಿ ವಿಚಾರವಾಗಿ ಪ್ರತಿಕ್ರಿಯಿಸಿ, ಅವರೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡಬೇಕು. ಅವರ ಪಕ್ಷದ ನಾಯಕರೂ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ರು. ಕೆಲಸ ಮಾಡಿದವರ ಬಿಲ್ ಅವರು ಏಕೆ ಕೊಡಲಿಲ್ಲ? ಎಂದು ಪ್ರಶ್ನಿಸಿದರು.

ಕಾಂಟ್ರಾಕ್ಟರ್​ಗಳು ಯಾರಿಗೆ ಎಷ್ಟು ಕೊಟ್ಟಿದಾರೆ ಎಂದು ಚರ್ಚೆ ಮಾಡಲು ಹೋಗಲ್ಲ. 10 ರಿಂದ 15 ಪರ್ಸೆಂಟ್ ಕಮಿಷನ್ ಕೇಳಿದ್ರು ಅಂತಾರೆ, ಯಾರು ಕೇಳಿದ್ರು?. ನಾನು ಏನಾದರೂ ಕಮಿಷನ್ ಕೇಳಿದ್ರೆ, ಇವತ್ತೇ ರಾಜಕೀಯ ನಿವೃತ್ತಿ ಆಗುತ್ತೇನೆ. ಅದೇ ರೀತಿ ಬೊಮ್ಮಾಯಿ ಅಥವಾ ಆರ್​ ಅಶೋಕ್​ ಅವರು ರಾಜಕೀಯದಿಂದ ನಿವೃತ್ತಿ ಆಗ್ತಾರಾ? ಎಂದು ಸವಾಲು ಹಾಕಿದರು.

ಅಶೋಕ ಮಾತಾಡಿದ್ದು ನೋಡಿದ್ದೇನೆ. ಒಂದು ಕಾಲು ಲಕ್ಷ ವೋಟ್​​ನಲ್ಲಿ ಸೋತು ಡೆಪಾಸಿಟ್ ಕಳ್ಕೊಂಡು ಇನ್ನೇನು ಆಗಬೇಕು?. ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ ಡಿಕೆಶಿ, ಅಶೋಕ ಚಕ್ರವರ್ತಿ ಪ್ರಶ್ನೆ ಕೇಳ್ತಿದ್ನಲ ಇದಕ್ಕೆ ಉತ್ತರ ಕೊಡ್ಲಿ ಎಂದು ಹೇಳದರು. ಅಜ್ಜಯ್ಯನ ಸನ್ನಿಧಿಯಲ್ಲಿ ಆಣೆಗೆ ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿ, ರಸ್ತೆಯಲ್ಲಿ ಹೋಗುವವರ ಪ್ರಶ್ನೆಗೆಲ್ಲ ಉತ್ತರ ಕೊಡಲ್ಲ. ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಡುವೆ. ಬಿಜೆಪಿ ನಾಯಕರು ಯಾಕೆ ಬಿಲ್ ಕ್ಲಿಯರ್ ಮಾಡ್ಲಿಲ್ಲ? ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ