Breaking News

ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ

Spread the love

ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ.

ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ.ಮಹದೇವಪ್ಪ ಹೇಳಿದರು.

ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆಯನ್ನು ಕಾನೂನು ಮಾಡುತ್ತದೆ ಎಂದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ