Breaking News

ಬಾಂಬೆ ಟೀಮ್ ಕಾಂಗ್ರೆಸ್‌ಗೆ ತೆರಳುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವರಾಮ್​ ಹೆಬ್ಬಾರ್

Spread the love

ಶಿರಸಿ (ಉತ್ತರಕನ್ನಡ) : ಈ ಹಿಂದೆ ಬಿಜೆಪಿ ಸೇರಿದ ಶಾಸಕರು ಪುನಃ ಕಾಂಗ್ರೆಸ್​ಗೆ ತೆರಳುತ್ತಾರೆ ಎಂಬ ಸುದ್ದಿಯನ್ನು ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡೆ.

ಮಾಧ್ಯಮದಲ್ಲಿ ಯಾಕೆ ಹೀಗೆ ಬಂದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಶಾಸಕ ಶಿವರಾಮ್​ ಹೆಬ್ಬಾರ್ ಹೇಳಿದರು.‌ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬೆ ಟೀಮ್ ಕಾಂಗ್ರೆಸ್‌ಗೆ ತೆರಳುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಈ ಸಂಬಂಧ ಯಾವುದೇ ಸಭೆ, ಸಮಾರಂಭ ಅಥವಾ ಚರ್ಚೆ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ. ಆದರೂ ಈ ವಿಷಯ ಪ್ರಸ್ತಾಪವಾಗಿದೆ ಎಂದು ಹೇಳಿದರು.

ಅಂತಹ ಪರಿಸ್ಥಿತಿ ಬಂದರೆ ಕ್ಷೇತ್ರದ ಜನರನ್ನು ಬಿಟ್ಟು ರಾಜಕಾರಣ ಮಾಡಲು ಆಗುವುದಿಲ್ಲ. ಅಂತಿಮವಾಗಿ ಅವರೇ ನಮ್ಮ ಹಣೆಬರಹ ಬರೆಯುತ್ತಾರೆ. ಅದು ಆವತ್ತಿರಬಹುದು, ಇವತ್ತು ಅಥವಾ ಮುಂದೇನೂ ಅಂತೆಯೇ ಇರುತ್ತದೆ. ಪ್ರಮುಖವಾದ ಯಾವುದೇ ನಿರ್ಣಯವನ್ನು ನಮ್ಮ ಕ್ಷೇತ್ರದಲ್ಲಿನ ಮುಖಂಡರೊಂದಿಗೆ ಚರ್ಚಿಸದೇ ಮಾಡಲು ಆಗುವುದಿಲ್ಲ ಎಂದರು. ನನಗೆ ಕಾಂಗ್ರೆಸ್ ಸೇರುವ ಕಾಲ ನಿರ್ಣಯ ಆಗಿಲ್ಲ. ಈ ಸಂಬಂಧ ಊಹಾಪೋಹಗಳಿಗೆ ಉತ್ತರ ಕೊಡುವ ಅವಶ್ಯಕತೆ ನನಗಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಬರ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿದ ಹೆಬ್ಬಾರ್, ರಾಜ್ಯದ ಹಲವು ಜಿಲ್ಲೆಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು. ಕಳೆದ ಒಂದು ತಿಂಗಳ ಹಿಂದಿನ ಪರಿಸ್ಥಿತಿಗೂ, ಇಂದಿನ ಪರಿಸ್ಥಿತಿಗೂ ತುಂಬಾ ಬದಲಾವಣೆ ಆಗಿದೆ. ಮಳೆಯಿಲ್ಲದೆ ತೊಂದರೆ ಅನುಭವಿಸುವ ಹಂತಕ್ಕೆ ಬಂದು ತಲುಪಿದ್ದೇವೆ. ಜೊತೆಗೆ ಕುಡಿಯುವ ನೀರಿಗೆ ಈಗಾಗಲೇ ತಾತ್ವಾರ ಎದುರಾಗಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ