Breaking News

ನೇಣಿಗೇರಲು ಸಿದ್ದವಿದ್ದೇನೆ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಕೆ.ಗೋಪಾಲಯ್ಯ

Spread the love

ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ದವಿದ್ದೇನೆ ಎಂದು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುತ್ತಾರೆ ಎನ್ನುವ ವದಂತಿ ಹರಡಿದೆ. ಹಾಗಾಗಿ ನನಗೆ ನಿನ್ನೆಯಿಂದ ಸ್ವೀಕರಿಸಲು ಸಾಧ್ಯವಾಗದಷ್ಟು ದೂರವಾಣಿ ಕರೆಗಳು ಬರುತ್ತಿದೆ. ಆದರೆ, ನಾನು ಯಾರನ್ನು ಭೇಟಿ ಆಗಿಲ್ಲ. ನಿನ್ನೆ ಸಂಜೆ (ಗುರುವಾರ) ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ ಎಂದು ವರದಿಯಾಗಿದೆ. ಆದರೆ, ನಾನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು.

ಕಳೆದ ಹತ್ತು ದಿನಗಳ ಹಿಂದೆ ಪಕ್ಷದ ಕಚೇರಿಯಲ್ಲಿ ಒಂದು ಮಾತು ಕೊಟ್ಟಿದ್ದೇನೆ. ಕ್ಷೇತ್ರದ ಜನ ನನಗೆ ಮತ ಕೊಟ್ಟಿದ್ದಾರೆ ಬಿಜೆಪಿಗೆ ಬಂದ ನಂತರ ಪಕ್ಷ ಗೌರವ ಸ್ಥಾನಮಾನ ಕೊಟ್ಟಿದೆ ಐದು ವರ್ಷ ವಿರೋಧ ಪಕ್ಷದಲ್ಲಿ ಕೆಲಸ ಮಾಡುತ್ತೇವೆ. ಆ ಶಕ್ತಿ ನಮಗೆ ಇದೆ. ದಯಮಾಡಿ ನಮ್ಮ ತೇಜೋವಧೆ ಮಾಡುವ ಕೆಲಸವನ್ನು ಮಾಡಬೇಡಿ ನಾವು ಭಾರತೀಯ ಜನತಾ ಪಕ್ಷದಲ್ಲೇ ಉಳಿಯುತ್ತೇವೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ