Breaking News

ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ.

Spread the love

ಬೆಂಗಳೂರು, ಜ.25- ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಕೊಟ್ಟಿದ್ದೇವೆ. ಅವರಿಗೆ ಜೀವ ಬೆದರಿಕೆ ಇದ್ದರೆ ಅದಕ್ಕೆ ಸಂಬಂಧಿಸಿದಂತೆ ವಿವರ ನೀಡಿದರೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಹೆಚ್ಚಿನ ಭದ್ರತೆ ಒದಗಿಸುತ್ತೇವೆ. ಆದರೆ, ವಿನಾಃಕಾರಣ ಆರೋಪ ಸರಿಯಲ್ಲ. ನಾನು ಸಚಿವನಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರಿಗೂ ಈ ಹಿಂದೆ ಮಾಜಿ ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ಭದ್ರತೆಯನ್ನು ನೀಡಲಾಗಿತ್ತೋ ಅಷ್ಟೇ ಭದ್ರತೆಯನ್ನು ಕುಮಾರಸ್ವಾಮಿಯವರಿಗೂ ನೀಡಲಾಗಿದೆ ಎಂದರು. ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಕುಮಾರಸ್ವಾಮಿಯವರು ಜೀವ ಬೆದರಿಕೆ ಸಂಬಂಧಿಸಿದ ವಿಚಾರ ಗೃಹ ಇಲಾಖೆ ಗಮನಿಸುತ್ತಿದೆ.

ಜೀವ ಬೆದರಿಕೆ ಇದ್ದರೆ ದೂರು ಕೊಡಲಿ. ತನಿಖೆ ಮಾಡಲಾಗುವುದು. ಆದರೆ, ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ