Breaking News

ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ.: ಹೆಬ್ಬಾಳ್ಕರ್

Spread the love

ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ ನಡೆದ ‘ನಮ್ಮೂರ ನಾಗಪಂಚಮಿ’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಾಗಪಂಚಮಿಗೆ ಉಂಡಿ ಹಬ್ಬ ಎಂದೂ ಕರೆಯುತ್ತಾರೆ. ಶೇಂಗಾ ಉಂಡೆ, ರವೆ ಉಂಡೆ, ಯಳ್ಳುಂಡೆ, ಒಣ ಕೊಬ್ಬರಿ, ಜೋಳದ ಅರಳು ಇತ್ಯಾದಿಗಳನ್ನು ನಾಗದೇವರಿಗೆ ಅರ್ಪಿಸುತ್ತಾರೆ. ನಮ್ಮ ಉತ್ತರ ಕರ್ನಾಟಕದ ಹೆಣ್ಣುಮಕ್ಕಳಿಗೆ ಈ ಹಬ್ಬ ತುಂಬಾ ಮಹತ್ವ ಎಂದರು.

ನಮ್ಮ ಉತ್ತರ ಕರ್ನಾಟಕದ ಮಂದಿಯ ಮಾತುಗಳು ಒರಟಾಗಿದ್ದರೂ ಮನಸ್ಸು ಬಹಳ ಸೂಕ್ಷ್ಮ ಹಾಗೂ ಮೃದು ಎಂದರು.
ಉತ್ತರ ಕರ್ನಾಟಕದಲ್ಲಿ ನಾಗಪಂಚಮಿ ಹಬ್ಬಕ್ಕೆ ವಿಶೇಷ ಮಾನ್ಯತೆ ಇದೆ. ಪಂಚಮಿ ಹಬ್ಬದ ಸೊಗಡು ಪ್ರತಿ ವರ್ಷ ನಡೆಯುತ್ತದೆ. ಈ ಹಬ್ಬದಲ್ಲಿ ಜೋಕಾಲಿ ಆಡೋದೆ ವಿಶೇಷ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಮ್ಮತನವನ್ನು ಆಚರಿಸುತ್ತಿರುವ ಆಯೋಜಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಅತ್ತೆ-ಮಾವನ ಮನಸ್ಥಿತಿ ಎಂದಿಗೂ ಬದಲಾಗಲ್ಲʼ; ವಿಡಿಯೋ ರೆಕಾರ್ಡ್‌ ಮಾಡಿ ನೇಣಿಗೆ ಶರಣಾದ ಶಿಕ್ಷಕಿ

Spread the loveನವದೆಹಲಿ: ಮದುವೆಯಾದ 8 ತಿಂಗಳ ಬಳಿಕ ಸರ್ಕಾರಿ ಶಿಕ್ಷಕಿಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ