Breaking News

307 ಟ್ರಾನ್ಸ್​ಲೇಟರ್​ ಹುದ್ದೆಗೆ ಅರ್ಜಿ ಆಹ್ವಾನ.. ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ

Spread the love

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಖಾಲಿ ಇರುವ ಟ್ರಾನ್ಸ್​ಲೇಟರ್​ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜ್ಯೂನಿಯರ್​ ಟ್ರಾನ್ಸ್​ಲೇಟರ್​ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 307 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ನಾತಕೋತ್ತರ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

 ಅಧಿಸೂಚನೆಹುದ್ದೆ ವಿವರ: ಜ್ಯೂನಿಯರ್​ ಟ್ರಾನ್ಸ್​ಲೇಷನ್​ ಆಫೀಸರ್​ 13, ಜ್ಯೂನಿಯರ್​ ಹಿಂದಿ ಟ್ರಾನ್ಸ್​ಲೇಟರ್​​​ 21, ಜ್ಯೂನಿಯರ್​ ಟ್ರಾನ್ಸ್​ಲೇಟರ್​ 263, ಸೀನಿಯರ್​ ಟ್ರಾನ್ಸ್​ಲೇಟರ್​​ 1, ಸೀನಿಯರ್​ ಹಿಂದಿ ಟ್ರಾನ್ಸ್​​ಲೇಟರ್​ 9 ಸೇರಿದಂತೆ ಒಟ್ಟು 307 ಹುದ್ದೆಗಳಿವೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು.

ವೇತನ: ಜ್ಯೂನಿಯರ್​ ಟ್ರಾನ್ಸ್​ಲೇಷನ್​ ಆಫೀಸರ್, ಜ್ಯೂನಿಯರ್​ ಹಿಂದಿ ಟ್ರಾನ್ಸ್​ಲೇಟರ್​​​, ಜ್ಯೂನಿಯರ್​ ಟ್ರಾನ್ಸ್​ಲೇಟರ್ ಹುದ್ದೆಗೆ 35,400 -1,12,400 ರೂ. ಹಾಗೂ ಸೀನಿಯರ್​ ಟ್ರಾನ್ಸ್​ಲೇಟರ್​​ ಮತ್ತು ಸೀನಿಯರ್​ ಹಿಂದಿ ಟ್ರಾನ್ಸ್​ಲೇಟರ್​​ ಹುದ್ದೆಗೆ 44,900 ರೂನಿಂದ 1,42,400 ರೂ.ವರೆಗೆ ವೇತನ ನಿಗದಿಸಲಾಗಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ನಿವೃತ್ತ ಸೇನಾಧಿಕಾರಿ, ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ: ಈ ಹುದ್ದೆಗಳನ್ನು ಮೂರು ಹಂತದಲ್ಲಿ ಆಯ್ಕೆ ಮಾಡಲಾಗುವುದು. ಮೊದಲ ಹಂತ ಲಿಖಿತ ಪರೀಕ್ಷೆ, ಎರಡನೇ ಹಂತದಲ್ಲಿ ದಾಖಲಾತಿ ಪ್ರಮಾಣಪತ್ರ ಮತ್ತು ವೈದ್ಯಕೀಯ ತಪಾಸಣೆ, ಅಂತಿಮ ಹಂತದಲ್ಲಿ ಸಂದರ್ಶನ ಇರಲಿದೆ.

ಈ ಹುದ್ದೆಗಳಿಗೆ ಆಗಸ್ಟ್​ 22 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 12 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ssc.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.


Spread the love

About Laxminews 24x7

Check Also

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.

Spread the loveಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ