Breaking News

ವಿಕ್ರಮ್ ಲ್ಯಾಂಡರ್​ಗೆ ಬಿಡಿಭಾಗಗಳ ಪೂರೈಕೆ.. ಚಂದ್ರಲೋಕಕ್ಕೂ ಹಬ್ಬಿದ ಬೆಳಗಾವಿ ಕೀರ್ತಿ

Spread the love

ಬೆಳಗಾವಿ: ಚಂದ್ರಯಾನ 3 ಯಶಸ್ಸಿನಲ್ಲಿ ಬೆಳಗಾವಿ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದು, ಸರ್ವೋ ಕಂಟ್ರೋಲ್ಸ್ ಏರೋಸ್ಪೇಸ್ ಆಂಡ್ ಟೆಕ್ನಾಲಜಿ ಕಂಪನಿಯು ವಿಕ್ರಮ್​ ಲ್ಯಾಂಡರ್​ಗೆ ಬಿಡಿಭಾಗಗಳನ್ನು ಪೂರೈಕೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಚಂದ್ರಲೋಕಕ್ಕೂ ಹರಡುವಂತೆ ಮಾಡಿದೆ.

ಇಡೀ ವಿಶ್ವವೇ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ವಿಕ್ರಮ್​ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೊಸ ಮೈಲಿಗಲ್ಲು ನಿರ್ಮಿಸಿದೆ. ಇನ್ನು ಚಂದ್ರಯಾನ 3 ಕ್ಕೆ ಕೆಲವು ಬಿಡಿ ಭಾಗಗಳನ್ನು ಪೂರೈಕೆ ಮಾಡಿದ್ದು ಬೆಳಗಾವಿಯ ಸರ್ವೋ ಕಂಟ್ರೋಲ್ಸ್ ಏರೋಸ್ಪೇಸ್ ಆಯಂಡ್ ಟೆಕ್ನಾಲಜಿ ಕಂಪನಿ. ಇದು ಕುಂದಾನಗರಿ ಜನ ಮತ್ತಷ್ಟು ಹೆಮ್ಮೆ ಪಡುವಂತೆ ಮಾಡಿದೆ.

ಇನ್ನು, ಈ ಕಂಪನಿಯ ಎಂಡಿ ದೀಪಕ್​ ಧಡೋತಿ ಈಟಿವಿ ಭಾರತ ಜೊತೆಗೆ ಮಾತನಾಡಿ, “ಚಂದ್ರಯಾನ-3 ಯಶಸ್ಸು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಿಂದ ಬರೆಯುವ ದಿನ. ಬಹಳ ಖುಷಿಯಾಗುತ್ತಿದೆ. ರಾಕೆಟ್​ಗೆ ಕ್ರಯೋಜನಿಕ್, ವಿಕ್ರಮ್ ಲ್ಯಾಂಡರ್​ಗೆ ಕ್ರಿಟಿಕಲ್ ಹೈಡ್ರೋಲಿಕ್ ಹೆಸರಿನ ಸೆನ್ಸಾರ್ ನೀಡಿದ್ದೆವು. ನಾವು ಕಳುಹಿಸಿರುವ ಸೆನ್ಸಾರ್​ಗಳು ಸೋಲಾರ್ ಪ್ಯಾನಲ್ ಓಪನ್ ಆಗಲು ಬಳಕೆ ಆಗುತ್ತವೆ. ಸದ್ಯ ವಿಕ್ರಮ್ ಲ್ಯಾಂಡರ್ ಚಲನವಲನ ಎಲ್ಲವೂ ಸೆನ್ಸಾರ್ ಮೇಲೆ ನಡೆಯುತ್ತಿದೆ. ಇಸ್ರೋ ಜೊತೆಗೆ 16 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಚಂದ್ರಯಾನ-2 ರಲ್ಲೂ ಕೂಡ ಬಿಡಿಭಾಗಗಳನ್ನ ಪೂರೈಸಿದ್ದೆವು. ಮುಂದೆ ಗಗನಯಾನಕ್ಕೂ ನಮ್ಮಲ್ಲಿ ಬಿಡಿ ಭಾಗಗಳು ತಯಾರು ಆಗುತ್ತಿವೆ” ಎಂದು ಮಾಹಿತಿ ಹಂಚಿಕೊಂಡರು.

ಭರತೇಶ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಯಾಟ್​ಲೈಟ್ ಲ್ಯಾಬ್: ವಿದ್ಯಾರ್ಥಿಗಳಿಗೆ ಖಗೋಳಶಾಸ್ತ್ರದ ಬಗ್ಗೆ ಅಧ್ಯಯನ ಮಾಡಲು ಅನುಕೂಲ ಆಗಲಿ ಎಂಬ ಉದ್ದೇಶದಿಂದ ಬೆಳಗಾವಿ ತಾಲೂಕಿನ ಶಿಂಧೊಳ್ಳಿಯ ಭರತೇಶ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅತ್ಯಾಧುನಿಕ ಸ್ಯಾಟ್​ಲೈಟ್ ಲ್ಯಾಬ್​ಅನ್ನು ಸರ್ವೋ ಕಂಟ್ರೋಲ್ಸ್ ಏರೋಸ್ಪೇಸ್ ಆಯಂಡ್ ಟೆಕ್ನಾಲಜಿ ಕಂಪನಿ ನಿರ್ಮಿಸಿದೆ. ಇಲ್ಲಿ ಚಂದ್ರಯಾನ-3 ರ ವಿಕ್ರಮ್​ ಲ್ಯಾಂಡರ್ ಯಾವ ರೀತಿ ಕೆಲಸ ಮಾಡುತ್ತದೆ ಎಂಬ ಮಾದರಿಯನ್ನೂ ಪ್ರದರ್ಶನಕ್ಕೆ ಇಡಲಾಗಿತ್ತು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ