Breaking News

ಕುಡಿತದ ಚಟಕ್ಕೆ‌ ಬಿದ್ದ ಮಗನಿಗೆ ತಂದೆಯೇ ಮಾರ್ಗದರ್ಶನ ಮಾಡಿ ಕೊಲೆ

Spread the love

ಸರಾಯಿ ಕುಡಿಯುವುದನ್ನು ಬಿಡುವಂತೆ ಮನೆಯವರು ಬುದ್ಧಿವಾದ ಹೇಳಿದರೂ ಕುಡಿತದ ಚಟಕ್ಕೆ‌ ಬಿದ್ದ ಮಗನಿಗೆ ತಂದೆಯೇ ಮಾರ್ಗದರ್ಶನ ಮಾಡಿ ಕೊಲೆ ಮಾಡಿಸಿದ ಘಟನೆ ಗೋಕಾಕ ತಾಲೂಕಿನ ಕುಟರನಟ್ಟಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸಂಗಮೇಶ ಮಾರುತಿ ತಿಗಡಿ (39) ಕೊಲೆಯಾದ ದುರ್ದೈವಿ. ಮಹೇಶ ಜೊತೆಗೆ ಉಳ್ಳಾಗಡ್ಡಿ ವ್ಯಾಪಾರ ಮಾಡುತ್ತಿದ್ದ ಯರಗಟ್ಟಿ ತಾಲೂಕಿನ ಮಂಜುನಾಥ ಶೇಖಪ್ಪ ಹೊಂಗಲ (43), ಕೊಲೆ ಮಾಡಲು ಸಹಾಯ ಮಾಡಿದ ಯರಗಟ್ಟಿ ತಾಲೂಕಿನ ಅಡಿವೆಪ್ಪ ಅಜ್ಜಪ್ಪ ಬೊಳೇತ್ತಿನ( 38) ಆರೋಪಿಗಳನ್ನು ಮುರುಗೋಡ ಪೊಲೀಸರು ಬಂಧಿಸಿದ್ದಾರೆ.

ಸಂಗಮೇಶನನ್ನು ಬೈಲಹೊಂಗಲ ಸರಾಯಿ ಅಂಗಡಿಯಲ್ಲಿ ಕಂಠಪೂರ್ತಿ ಕುಡಿಸಿದ ಆರೋಪಿ ಮಂಜುನಾಥ ಸಂಗಮೇಶನನ್ನು ಬೈಕ್ ಮೇಲೆ ಅಡಿವೆಪ್ಪನ ಸಹಾಯದಿಂದ ಕುಟರನಟ್ಟಿಗೆ ಕರೆದುಕೊಂಡು‌ ಹೋಗಿ‌ ನಿರ್ಜನ ಪ್ರದೇಶದಲ್ಲಿ ಕಲ್ಲು ಎತ್ತಿ ಹತ್ಯೆ ಮಾಡಿ ಯಾರಿಗೂ ಸುಳಿವು ಸಿಗದಂತೆ ಪರಾರಿಯಾಗಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಲೆಯಾದ ಸಂಗಮೇಶ ಬೈಲಹೊಂಗಲ ಹಾಗೂ ಬೆಳಗಾವಿಯಲ್ಲಿ ಉಳ್ಳಾಗಡ್ಡಿ ವ್ಯಾಪಾರ ವಹಿವಾಟು ಮಾಡಿಕೊಂಡು ಬರುತ್ತಿದ್ದ. ಬಂದ ಲಾಭದಲ್ಲಿ ನಿತ್ಯ ಸರಾಯಿ ಕುಡಿಯುವುದೆ ಕಾಯಕ ಮಾಡಿಕೊಂಡು ಮನೆಯವರಿಗೂ ಭಾರವಾಗಿದ್ದ. ಸರಾಯಿ ಬಿಡುವಂತೆ ಮನೆಯಲ್ಲಿ ಎಷ್ಟೆ ಬುದ್ಧಿವಾದ ಹೇಳಿದರೂ ಕುಡಿತ ಮುಂದುವರೆಸಿದ್ದ ತಂದೆಯ

ಮಾರ್ಗದರ್ಶನದಲ್ಲಿ ಆತನೊಂದಿಗೆ ವ್ಯಾಪಾರ ವಹಿವಾಟು ಮಾಡುತ್ತಿದ್ದ ಮಂಜುನಾಥ ಆತನ ಸ್ನೇಹಿತ ಅಡಿವೆಪ್ಪನ ಸಹಾಯದಿಂದ ಗೋಕಾಕ ತಾಲೂಕಿನ ಅಂಕಲಗಿಯಲ್ಲಿ ಮೂವರು ಸರಾಯಿ ಕುಡಿದು ಕುಟರನಟ್ಟಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸಂಗಮೇಶನ ತಲೆಯ ಮೇಲೆ ಕಲ್ಲು ಎತ್ತಿ ಕೊಲೆ ಮಾಡಿ ಪರಾರಿಯಾಗಿದ್ದರು. ಸುದ್ದಿ ತಿಳಿದ ಮುರುಗೋಡ ಪೊಲೀಸರು ಸ್ಥಳಕ್ಕೆ ಹೋದಾಗ ಹತ್ಯೆಯಾಗಿದ್ದ ಸಂಗಮೇಶನ ಜೇಬಿನಲ್ಲಿ ಸುಣ್ಣದ ಡಬ್ಬಿ ಹಾಗೂ ಆರೋಪಿ ಮಂಜುನಾಥ ಮೊಬೈಲ್ ನಂಬರ್ ಚೀಟಿ ಸಿಗುತ್ತದೆ. ಇದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ