Breaking News

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ: ಸತೀಶ್ ಜಾರಕಿಹೊಳಿ

Spread the love

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು’ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮಾಧ್ಯಮದವರ ಜೊತೆಗೆ ಮಾತನಾಡಿದ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಲೋಕಸಭಾ ತಯಾರಿ ಇನ್ನೂ ನಡೆದಿಲ್ಲ , ಚುನಾವಣೆಗೆ ಇನ್ನು ಸಮಯವಿದೆ ,ಹಿಂದಿನ ಸರ್ಕಾರದಲ್ಲಿ ಕೋವಿಡ ಸಮಯದಲ್ಲಿ ಸುಮಾರು ಹಗರಣಗಳು ಆಗಿವೆ. ಹತ್ತು ರೂಪಾಯಿ ಮಾಸ್ಕನ್ನು ನೂರು ರೂಪಾಯಿಗೆ ಮಾರಿದ್ದಾರೆ ಅದರ ಬಗ್ಗೆ ತನಿಖೆಯಾಗಬೇಕು , ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು ,

ನಾವೂ ಯಾರೂ ಈ ಹಿಂದೆ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಕರೆಸಿಕೊಳ್ಳುತ್ತೀಲ್ಲ, ಅವರಿಗೆ ತೊಂದರೆ ಕೂಡುವ ಪ್ರಶ್ನೆಯೆ ಬರಲ್ಲ ಸುಧಾಕರ ವಿರುದ್ದ ತನಿಖೆ ಮಾಡುತ್ತೇವೆ , ಅವರ ಮೇಲೆ ಭ್ರಷ್ಟಾಚಾರ ಆರೋಪವಿದೆ ,

ಇನ್ನೂ ಪ್ರಿಯಾಂಕಾ ಜಾರಕಿಹೊಳಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಮಾಧ್ಯಮದವರ ಪ್ರಶ್ನೆಗೆ ಈ ಬಗ್ಗೆ ನಿರ್ಧಾರ ಮಾಡಿಲ್ಲ ನಮ್ಮಲ್ಲಿ ತುಂಬಾನೆ ಆಕಾಂಕ್ಷಿಗಳು ಇದ್ದಾರೆ , ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ನಡುವೆ ಯಾವದೇ ಮನಸ್ತಾಪವಿಲ್ಲ ನಾವೋ ಎಲ್ಲರೂ ಒಂದೇ ಎಂದು ಹೇಳಿದ್ದರು .

ನೈತಿಕ ಪೊಲೀಸಗಿರಿ ಬಗ್ಗೆ ಉತ್ತರಿಸಿದ ಸಚಿವರು ಜಿಲ್ಲೆಯಲ್ಲಿ ನೈತಿಕ ಪೊಲೀಸಗಿರಿ ಅವಕಾಶವಿಲ್ಲ , ಹಿಂಡಿಲಗಾ ಜೈಲಿನಲ್ಲಿ ಕೈದಿಗಳಿಗೆ ಮೊಬೈಲ್ ನೀಡಿರುವುದು ಬಗ್ಗೆ ಎಸ್.ಪಿ ನೋಡಿಕೊಳ್ಳುತ್ತಾರೆ ಎಂದು ಹೇಳಿದರು


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

Spread the loveಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ