ಹಾವೇರಿ : ಜಿಲ್ಲೆಯಲ್ಲಿ ರವಿವಾರ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿಯಲ್ಲಿ ಗಿರೀಶ್ ಮುರ್ಡೆಪ್ಪನವರ್ ಮೃತಪಟ್ಟಿದ್ದರೆ, ಮತ್ತೊಂದು ಕಡೆ ಬ್ಯಾಡಗಿ ತಾಲೂಕಿನ ಶೀಡೆನೂರು ಗ್ರಾಮದ ನಾಗೇಶಪ್ಪ ಕೊಡಗದ್ದಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಿರೀಶ್ ಬ್ಯಾಂಕ್ನಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಮತ್ತು ಸೊಸೈಟಿಯಲ್ಲಿ ಎರಡು ಲಕ್ಷ ಮತ್ತು ಕೈಗಡ ಒಂದೂವರೆ ಲಕ್ಷ ಸಾಲ ಮಾಡಿದ್ದ. ತಮ್ಮ ಮನೆಯಲ್ಲಿ ಗಿರೀಶ್ ಸಾವಿಗೆ ಶರಣಾಗಿದ್ದಾರೆ. ಈ ಕುರಿತಂತೆ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ನಾಗೇಶಪ್ಪ ಒಂದು ಬ್ಯಾಂಕ್ನಲ್ಲಿ 4 ಲಕ್ಷ ರೂ. ಮತ್ತೊಂದು ಬ್ಯಾಂಕ್ನಲ್ಲಿ 3 ಲಕ್ಷ 80 ಸಾವಿರ ಸಾಲ ಮಾಡಿದ್ದರು. ಸಾಲ ತೀರಿಸಲು ವಿಫಲವಾಗಿ ತಮ್ಮ ಮನೆಯ ದನದ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗೇಶಪ್ಪ ಆತ್ಮಹತ್ಯೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7