Breaking News

ಹೆತ್ತ ಅಮ್ಮನನ್ನೇ ಕೊಂದನಾ ಕುಡುಕ ಮಗ?

Spread the love

ಶಿವಮೊಗ್ಗ: ತಾಯಿಯನ್ನು ಕಣ್ಣಿಗೆ ಕಾಣುವ ದೇವರು ಎಂದು ಕರೆಯುತ್ತಾರೆ. ಆದರೆ, ಇಂತಹ ದೇವರನ್ನೇ ಹೆತ್ತ ಮಗನೊಬ್ಬ ಕೊಂದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಭದ್ರಾವತಿ ಪಟ್ಟಣದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾವಿನಕೆರೆ ಕಾಲೋನಿ ‌ನಿವಾಸಿ ಸುಲೋಚನಮ್ಮ ಮೃತರು. ಆಕೆಯ ಮಗ ಸಂತೋಷ್​ ಕೊಲೆ ಆರೋಪಿ. ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿ ಸಂತೋಷ್​ ತನ್ನ ತಾಯಿಯನ್ನು ಬಡಿಗೆಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ತೋಟದಲ್ಲಿ ಮಲಗಿ ಕೊಂಡಿದ್ದಾನೆ ಎಂಬುವುದು ಸ್ಥಳೀಯರ ಆರೋಪ.

ಸುಲೋಚನಮ್ಮ ಅವರಿಗೆ ಇಬ್ಬರು ಮಕ್ಕಳು. ಇನ್ನೊಬ್ಬ ಮಗ ತಾಯಿಯಿಂದ ಬೇರೆ ವಾಸ ಮಾಡುತ್ತಿದ್ದಾರೆ. ಸಂತೋಷ್​ ಪ್ರತಿ ದಿನ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಹಣ ನೀಡದೇ ಕುಡಿದುಕೊಂಡು ಬರುತ್ತಿದ್ದನಂತೆ. ಮದುವೆಯಾಗಿ ಮಕ್ಕಳಿದ್ದರೂ ದುಡಿದು ಸಂಸಾರ ನಡೆಸದೇ ದುಡಿದ ಎಲ್ಲ ಹಣವನ್ನು ವ್ಯರ್ಥ ಮಾಡುತ್ತಿದ್ದನಂತೆ. ಇದರಿಂದ ಸಂತೋಷ್​ ಹೆಂಡತಿ ತನ್ನ ಮಕ್ಕಳ ಜತೆ ಎಂ.ಸಿ ಹಳ್ಳಿಗೆ ಹೋಗಿ ನೆಲೆಸಿದ್ದಾರೆ. ಅಲ್ಲಿಗೂ ಹೋಗಿ ಆರೋಪಿ ಕಿರಿಕಿರಿಯನ್ನುಂಟು ಮಾಡುತ್ತಿದ್ದನಂತೆ. ಹಗಲು ರಾತ್ರಿ ಎನ್ನದೇ ಕುಡಿದು ಅಲೆಯುತ್ತಿದ್ದ ಆತ ಭಾನುವಾರ ರಾತ್ರಿ ಕುಡಿಯಲು ಹಣ ನೀಡುವಂತೆ ತಾಯಿಯನ್ನು ಕೇಳಿದ್ದಾನೆ. ಈ ವಿಚಾರಕ್ಕೆ ತಾಯಿ ಮಗನ ನಡುವೆ ಜಗಳ ನಡೆದಿದೆ. ಕುಡಿಯಲು ಹಣ ಸಿಗದ ಕಾರಣ ತಾಯಿಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ