Breaking News

ಆಗಸದಲ್ಲಿ ನಿಂತ ಮಗುವಿನ ಉಸಿರು.. ಬೆಂಗಳೂರು – ದೆಹಲಿ ವಿಮಾನ ತುರ್ತು ಭೂಸ್ಪರ್ಶ.. ಕಂದಮ್ಮನ ಪಾಲಿಗೆ ದೇವರಾದ ವೈದ್ಯರು..

Spread the love

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರು ನವದೆಹಲಿ ವಿಮಾನವನ್ನು ಭಾನುವಾರ ತಡರಾತ್ರಿ ನಾಗಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್​​ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗಪುರ, ಮಹಾರಾಷ್ಟ್ರ: ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನವನ್ನು ನಾಗಪುರನಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್​ ಮಾಡಲಾಗಿತ್ತು.

ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸಮಸ್ಯೆ ಇದ್ದು, ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ಕಾರಣ ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುಬೇಕಾಗಿದೆ ಎಂದು ಸೂಚಿಸಿದರು. ಹೀಗಾಗಿ ವಿಮಾನಯಾನದ ಮಾರ್ಗವನ್ನು ಬದಲಾಯಿಸಿದ ಪೈಲಟ್​ಗಳು ನಾಗ್ಪುರ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದರು.

ದೇವರಾದ ಸಹ ಪ್ರಯಾಣಿಕರು: ಮಗುವಿನ ಸ್ಥಿತಿ ಹದಗೆಟ್ಟು ಉಸಿರಾಟ ಸ್ಥಗಿತಗೊಂಡಿದ್ದು, ವಿಮಾನದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಕೂಡಲೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯರ ಜೊತೆ ಸಹ ಪ್ರಯಾಣಿಕರು ಕೈ ಜೋಡಿಸಿದರು. ಅವರು ತಕ್ಷಣ ಮಗುವಿಗೆ ಸಿಪಿಆರ್ ನೀಡಿದರು ಮತ್ತು ಸಾಧ್ಯವಾದಷ್ಟು ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಿದರು. ಸಿಪಿಆರ್​ ಬಳಿಕ ಮಗು ಉಸಿರಾಡತೊಡಗಿದೆ. ಬಳಿಕ ಲಭ್ಯವಿರುವ ಸಂಪನ್ಮೂಲಗಳ ಸಹಾಯದಿಂದ ಎಲ್ಲರೂ 45 ನಿಮಿಷಗಳ ಕಾಲ ಹೆಣ್ಣು ಮಗುವಿಗೆ ಚಿಕಿತ್ಸೆ ನೀಡಲಾಯಿತು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ