Breaking News

ಹೆಸ್ಕಾಂನಲ್ಲಿ 248 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಹೆಸ್ಕಾಂನಲ್ಲಿ ಒಂದು ವರ್ಷದ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ, ನೇಮಕಾತಿ ಸೇರಿದಂತೆ ಇನ್ನಿತರ ವಿವರಗಳು ಇಲ್ಲಿವೆ.

ಹುಬ್ಬಳ್ಳಿ ವಿದ್ಯುತ್​​ ಸರಬರಾಜು ಕಂಪನಿ ನಿಯಮಿತದಿಂದ ಪ್ರಸಕ್ತ ಸಾಲಿನ ವೃತ್ತಿ ತರಬೇತಿಗಾಗಿ 248 ಐಟಿಐ ಅಪ್ರೆಂಟಿಸ್​ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೆಸ್ಕಾಂನಲ್ಲಿ ಕಾರ್ಯ ನಿರ್ವಹಣೆ ಅನುಭವವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಈ ವೇಳೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಶಿಷ್ಯವೇತನವನ್ನು ನೀಡಲಾಗುವುದು.

 ಅಧಿಸೂಚನೆಹುದ್ದೆ ವಿವರ: ಹೆಸ್ಕಾಂನಲ್ಲಿ ಐಟಿಐ ಎಲೆಕ್ಟ್ರಿಶಿಯನ್​ ಅಪ್ರೆಂಟಿಸ್​​ಗಳ ನೇಮಕಾತಿ

ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷದ ಐಟಿಐ (ಎಲೆಕ್ಟ್ರಿಶಿಯನ್​) ಅಭ್ಯಾಸ ಮಾಡಿದ್ದು, ಎಸಿವಿಟಿ, ಎಸ್​ಸಿವಿಟಿ- ಪ್ರಾವಿಷನಲ್​ ನ್ಯಾಷನಲ್​ ಟ್ರೇಡ್​ ಸರ್ಟಿಫಿಕೇಟ್​​ ಅಂಕ ಪಟ್ಟಿ ಹೊಂದಿರಬೇಕು.

ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ವೇತನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್​ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಒಂದು ವರ್ಷದ ಅಪ್ರೆಂಟಿಸ್​​ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ 7 ಸಾವಿರ ರೂ. ನೀಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಪೋಸ್ಟಲ್​ ಆರ್ಡರ್​ ಮೂಲಕ ಅರ್ಜಿ ಶುಲ್ಕ ಭರಿಸಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 50 ರೂ. ಸಾಮಾನ್ಯ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈಗಾಗಲೇ ಕೇಂದ್ರ ಸರ್ಕಾರದ ಅಪ್ರೆಂಟಿಸ್​ ಪೋರ್ಟಲ್​ನಲ್ಲಿ ನೋಂದಾಯಿಸಿರಬೇಕು. ನಂತರ ಹುಬ್ಬಳಿ ವಿದ್ಯುತ್​ ಪೂರೈಕೆ ಕಂಪನಿ ನಿಯಮಿತಿವನ್ನು ಆಯ್ಕೆ ಮಾಡಬೇಕು. ಅಪ್ರೆಂಟಿಸ್​​ ಶಿಪ್​ ಪೋರ್ಟಲ್​ನಲ್ಲಿ ನೋಂದಣಿ ಮಾಡಿಕೊಂಡ ಅರ್ಜಿ ಪ್ರತಿ ಜೊತೆಗೆ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ ಜೊತೆಗೆ ವಿದ್ಯಾರ್ಹತೆ ಮತ್ತು ಸರ್ಕಾರ ಆಸ್ಪತ್ರೆ ವೈದ್ಯರಿಂದ ದೃಢೀಕರಿಸಿದ ದೈಹಿಕ ಸಾಮರ್ಥ್ಯದ ಪ್ರಮಾಣ ಪತ್ರವನ್ನು ಈ ಕೆಳಕಂಡ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾರ್ಯನಿರ್ವಾಹಕ ಅಭಿಯಂತರರು (ವಿ), ಕೈಗಾರಿಕಾ ತರಬೇತಿ ಕೇಂದ್ರ, (ಐಟಿಸಿ), ಹುಬ್ಬಳ್ಳಿ ವಿದ್ಯುತ್​ ಸರಬರಾಜು ಕಂಪನಿ ನಿಯಮಿತ, ವಿದ್ಯುತ್​ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ- 580024.

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು hescom.karnataka.gov.in ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆ ಸಂಬಂದ ಹೆಚ್ಚಿನ ಮಾಹಿತಿಗೆ 0836-2956611 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ