Breaking News

ದಶಕದಿಂದ ಪಡತರವಾಡಿ ಗ್ರಾಮಕ್ಕಿಲ್ಲ ಬಸ್​ ಸಂಪರ್ಕ.. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ, ಗ್ರಾಮಸ್ಥರಿಗೂ ತೊಂದರೆ

Spread the love

ಚಿಕ್ಕೋಡಿ: ಅಥಣಿ ತಾಲೂಕಿನ ಪಡತರವಾಡಿ ಗ್ರಾಮಕ್ಕೆ ಸರಿಯಾದ ಬಸ್​ ಸಂಪರ್ಕವಿಲ್ಲದೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಮತ್ತು ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಈ ಗ್ರಾಮಕ್ಕೆ ಕಳೆದ 15 ವರ್ಷಗಳಿಂದ ಬಸ್​ ಸಂಚಾರ ಸ್ಥಗಿತಗೊಂಡಿದ್ದು ಗ್ರಾಮದ ಜನರು, ವಿದ್ಯಾರ್ಥಿಗಳು, ವಯೋವೃದ್ಧರು, ಮಹಿಳೆಯರಿಗೆ ತೊಂದರೆಯಾಗಿದೆ.

ಒಂದೂವರೆ ಕಿಲೋಮೀಟರ್ ದೂರದ ಐಗಳಿ-ತೆಲಸಂಗ್ ರಸ್ತೆಗೆ ಸಂಚಾರ ಮಾಡಿ ಬಳಿಕ ಅಲ್ಲಿಂದ ಬೇರೊಂದು ಬಸ್ ಮೂಲಕ ಊರುಗಳಿಗೆ ಸಂಚರಿಸಬೇಕಾಗಿದೆ​. ಮಳೆಗಾಲ ಹಾಗೂ ರಾತ್ರಿ ಸಮಯದಲ್ಲಿ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ ಆದಷ್ಟು ಬೇಗನೆ ತಮ್ಮ ಗ್ರಾಮಕ್ಕೆ ಸರ್ಕಾರಿ ಬಸ್​ ಸಂಪರ್ಕ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಲ್ಲಿನ ಜನರು ಮನವಿ ಮಾಡಿದ್ದಾರೆ.

ಈ ಬಗ್ಗೆ ಗ್ರಾಮಸ್ಥರಾದ ಲಕ್ಷ್ಮಣ್ ಕೋಟ್ಯಾಳ ಹಾಗೂ ಜ್ಞಾನದೇವ ಜಾಧವ್​ ಎಂಬುವರು ಮಾತನಾಡಿ, ಕಳೆದ ಐದಿನೈದು ವರ್ಷದಿಂದ ನಮ್ಮ ಗ್ರಾಮಕ್ಕೆ ಬಸ್​ ಸಂಪರ್ಕವಿಲ್ಲದೆ ತುಂಬಾ ತೊಂದ್ರೆ ಉಂಟಾಗಿದೆ. ಸ್ಥಳೀಯ ಶಾಸಕ ಲಕ್ಷ್ಮಣ್ ಸವದಿ ಸಾರಿಗೆ ಸಚಿವರಾಗಿದ್ದ ವೇಳೆ ಬಸ್​ ಸಂಪರ್ಕ ಕಲ್ಪಿಸುವುಂತೆ ಮನವಿ ಸಲ್ಲಿಸಲಾಗಿತ್ತು. ಆದರೇ ಈವರೆಗೂ ಗ್ರಾಮಕ್ಕೆ ಬಸ್​ ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಆಗಲಾದರೂ ನಮ್ಮ ಸಮಸ್ಯೆ ಬಗರಹರಿಬಹುದು. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ದಿನನಿತ್ಯವೂ ತೊಂದರೆ ಅನುಭವಿಸುವಂತಾಗಿದೆ.

 


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ