Breaking News

ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, ಲಾಟರಿ ಮುಖ್ಯಮಂತ್ರಿ : ಕೆ ಎಸ್ ಈಶ್ವರಪ್ಪ

Spread the love

ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ” ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ ಆಗಿದ್ದು, ಯಾವಾಗಲೂ ಅವರು ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಬರುತ್ತದೆ. ಆಗ ಕಾಂಗ್ರೆಸ್ ಸ್ಥಿತಿ ಏನು ಎಂದು ಗೊತ್ತಾಗುತ್ತದೆ. ಇದರ ಜೊತೆಗೆ ಗ್ಯಾರಂಟಿ ಯೋಜನೆಗಳ ಸ್ಥಿತಿ ಏನಾಗುತ್ತದೆ ಎಂಬುದನ್ನು ನೋಡುತ್ತಿರಿ” ಎಂದು ವ್ಯಂಗ್ಯವಾಡಿದರು.

ಬಳಿಕ, ಸಿದ್ದರಾಮಯ್ಯ ಮುಸಲ್ಮಾನರ ದತ್ತು ಪುತ್ರ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹನ ವಿರುದ್ಧ ಮಾತನಾಡಿದರೆ ಕಾಂಗ್ರೆಸ್​ಗೆ ಮತಗಳು ಬರುತ್ತದೆ ಎಂದುಕೊಂಡಿದ್ದಾರೆ. ಆದ್ರೆ, ಇದೆಲ್ಲಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ