Breaking News

370ನೇ ವಿಧಿ ರದ್ದತಿ ವಿಚಾರಣೆ: ಮುಖ್ಯ ಅರ್ಜಿದಾರ, ಸಂಸದ ಅಕ್ಬರ್​ ಸಂವಿಧಾನ ನಿಷ್ಠೆ ಸಾಬೀತಿಗೆ ಕೋರ್ಟ್​ ಸೂಚನೆ

Spread the love

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ 370 ನೇ ವಿಧಿ ರದ್ದತಿ ಬಗ್ಗೆ ಸುಪ್ರೀಂಕೋರ್ಟ್​ ನಿತ್ಯ ವಿಚಾರಣೆ ನಡೆಸುತ್ತಿದ್ದು, ಮುಖ್ಯ ಅರ್ಜಿದಾರರಾಗಿರುವ ಬಾರಾಮುಲ್ಲಾ ಕ್ಷೇತ್ರದ ಸಂಸದ ಮುಹಮದ್​ ಅಕ್ಬರ್​ ಲೋನ್​ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಖಂಡಿಸಿ, ದೇಶದ ಸಂವಿಧಾನದ ಮೇಲೆ ಇರುವ ನಿಷ್ಠೆಯ ಬಗ್ಗೆ ಅಫಿಡವಿಟ್​ ಸಲ್ಲಿಸಲು ಕೋರ್ಟ್​ ಸೂಚಿಸಿದೆ.

 

15ನೇ ದಿನದ ವಿಚಾರಣೆಯಲ್ಲಿ ಮುಖ್ಯ ಅರ್ಜಿದಾರ ಅಕ್ಬರ್​ ಲೋನ್​ ವಿರುದ್ಧವೇ ಭಾರತ ವಿರೋಧಿ ನಡೆಯ ಬಗ್ಗೆ ವಾದ ನಡೆಯಿತು. ಕೇಂದ್ರ ಸರ್ಕಾರದ ಪರ ವಾದ ಮಂಡಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಅರ್ಜಿದಾರ ಅಕ್ಬರ್​ ಲೋನ್​ ದೇಶದ ಸಂವಿಧಾನ ನೀಡಿರುವ ಅವಕಾಶದಂತೆ ಇಲ್ಲಿನ ಸಂಸದರಾಗಿದ್ದಾರೆ. ಈ ಹಿಂದೆ ಅವರು ಶಾಸಕಾಗಿದ್ದ ವೇಳೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲೇ ‘ಪಾಕಿಸ್ತಾನ್​ ಜಿಂದಾಬಾದ್​’ ಎಂದು ಘೋಷಣೆ ಕೂಗಿದ ಆರೋಪವಿದೆ. ಹೀಗಾಗಿ ಅವರು ಮೊದಲು ದೇಶದ ಸಂವಿಧಾನದ ನಿಷ್ಠೆಯನ್ನು ಸಾಬೀತು ಮಾಡಲಿ. ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದವನ್ನು ವಿರೋಧಿಸಿ ಅಫಿಡವಿಟ್​ ಸಲ್ಲಿಸಬೇಕು ಎಂದು ಕೇಳಿದರು.

ಮಾಹಿತಿ ನೀಡಲು ಸೂಚಿಸಿದ ಕೋರ್ಟ್​: ಮನ್ನಿಸಿದ ಕೋರ್ಟ್​, ಸಂಸದ ಅಕ್ಬರ್​ ಲೋನ್​ಗೆ ಭಾರತದ ಸಂವಿಧಾನದ ಮೇಲೆ ಇರುವ ನಿಷ್ಠೆಯ ಬಗ್ಗೆ ಅಫಿಡವಿಟ್​ ಸಲ್ಲಿಸಲು ಸೂಚಿಸಿದೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಉಗ್ರಗಾಮಿತ್ವ ಮತ್ತು ಪ್ರತ್ಯೇಕತಾವಾದವನ್ನು ವಿರೋಧಿಸುವ ಬಗ್ಗೆಯೂ ಲೋನ್ ದೃಢೀಕರಣ ನೀಡಬೇಕು ಎಂದೂ ಹೇಳಿದೆ.

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಂಸದ ಅಕ್ಬರ್​ ಲೋನ್​ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಕ್ರಮ ಅಸಾಂವಿಧಾನಿಕವಾಗಿದೆ. ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರಳಿ ನೀಡಿ ವಿಶೇಷಾಧಿಕಾರ ಪುನಸ್ಥಾಪಿಸಬೇಕು ಎಂದು ಕೋರಿದ್ದಾರೆ.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ