Breaking News

ರಸ್ತೆ ಅಪಘಾತದಲ್ಲಿ ಸಾವಿನಲ್ಲೂ ಒಂದಾದ ಅಣ್ಣ ತಂಗಿ

Spread the love

ಬೆಳಗಾವಿ : ಕಾರು ಮತ್ತು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಮೇಲಿದ್ದ ಅಣ್ಣ-ತಂಗಿ ಸಾವನ್ನಪ್ಪಿರುವ ಘಟನೆ ಮಲಿಕವಾಡ-ನಣದಿವಾಡಿ ರಸ್ತೆಯಲ್ಲಿ ನಡೆದಿದೆ.

ಪ್ರಶಾಂತ ನಾಗರಾಜ ತುಳಸಿಕಟ್ಟಿ(21) ಮತ್ತು ಪ್ರಿಯಾಂಕ ನಾಗರಾಜ ತುಳಸಿಕಟ್ಟಿ (19) ಸಾವಿನಲ್ಲೂ ಒಂದಾದ ಅಣ್ಣ-ತಂಗಿ ಎಂದು ತಿಳಿದು ಬಂದಿದೆ.

ಮೂಲತಃ ಸದಲಗಾ ಪಟ್ಟಣದ ನಿವಾಸಿಗಳಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕ್ಕೋಡಿಯ ಪರಟಿನಾಗಲಿಂಗೇಶ್ವರ ದೇವಸ್ಥಾನಕ್ಕೆ ಎಂದು ದ್ವಿಚಕ್ರ ವಾಹನ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆ ಪಕ್ಕಕ್ಕೆ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಮೂಲಕ ಕೊಲ್ಹಾಪೂರದ ಕಣೇರಿ‌ಯ ಆಸ್ಪತ್ರೆಗೆ ಸಾಗಿಸುವಾಗ ದಾರಿ‌ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ಬಗ್ಗೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ