Breaking News

ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು.: ಸಿದ್ದರಾಮಯ್ಯ

Spread the love

ಮೈಸೂರು : ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ.

 

ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 

ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಸಹ ಬಿಜೆಪಿಗೆ ಹೋಗದು

. ನಾನು ಯಾವುದೇ ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡಿದರೇ, ಅದಕ್ಕೆ ಆ ಪಕ್ಷವನ್ನು ಸೇರುತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ