Breaking News

ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ: ಕೋಡಿಮಠ ಸ್ವಾಮೀಜಿ

Spread the love

ಹುಬ್ಬಳ್ಳಿ: ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ರಾಜಕೀಯದಲ್ಲಿ ಏನಾಗುತ್ತದೆ ಎಂದು ಯುಗಾದಿ ನಂತರ ಕಾದು‌ನೋಡಿ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಬರಗಾಲದ ಛಾಯೆ ಬಗ್ಗೆ ಮಾತನಾಡಿ, ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದರೆ, ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನನ್ನ‌ ಕ್ಷಮಿಸುವುದಿಲ್ಲ.

ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ, ಮನುಷ್ಯನ‌ ಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ಪರಿಸ್ಥಿತಿಯನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರವರ ವಿಚಾರ. ಅದರ ಬಗ್ಗೆ ಹೇಳಲು ಆಗುವುದಿಲ್ಲ. ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ, ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ ಎಂದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತು ಮಾತನಾಡಿ, ಇದು ಅವರವರ ಧರ್ಮದವರ ಹೇಳಿಕೆ. ಅದು ಅವರ‌ನೋವಿನ ಸಂಗತಿ. ಎಲ್ಲಾ ಜನಾಂಗದಲ್ಲಿಯೂ ಅವರವರ ನೋವು ಇರುತ್ತೆ.

ಅದನ್ನು ಈ ರೀತಿ ನೋವಿನ‌ ಮೂಲಕ ಹೊರಹಾಕುತ್ತಾರೆ. ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ