Breaking News

ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷಿ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಬಳೆಯ ಅಲಂಕಾರ

Spread the love

ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷಿ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಬಳೆಯ ಅಲಂಕಾರ ಮಾಡಲಾಗಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ದೇವಿಗೆ ಉಡಿ ತುಂಬಿದರು.

ಬೆಳಗ್ಗೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತ ಸಾಗರ ದೇವಸ್ಥಾನಕ್ಕೆ ಆಗಮಿಸಿತ್ತು. ಬೆಳಗ್ಗೆ 4 ಗಂಟೆಯಿಂದ ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಗೆ ಉಡಿ ತುಂಬಿದರು. ಶ್ರಾವಣ ಮಾಸದ ಕೊನೆಯ ಮಂಗಳವಾರ ಪ್ರತಿ ವರ್ಷ ಗ್ರಾಮಸ್ಥರು ಉಡಿ ತುಂಬುವ ಸಂಪ್ರದಾಯವಿದ್ದು, ಅದರಂತೆ ಗ್ರಾಮಸ್ಥರು ದೇವಿಗೆ ಉಡಿ ತುಂಬಿ ಪುನೀತರಾದರು.

ದೇವಿಗೆ ವಿಶೇಷವಾಗಿ ಬಳೆಯ ಅಲಂಕಾರ ಮಾಡಲಾಗಿತ್ತು. ಜತೆಗೆ ದೇವಸ್ಥಾನ ಆವರಣದಲ್ಲಿ ತಳಿರು ತೋರಣ ಹಾಗೂ ಹೂವಿನಿಂದ ಸಿಂಗಾರ ಮಾಡಲಾಗಿತ್ತು. ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಬಂದು ಗಂಟೆಗಟ್ಟಲೇ ಕಾಯ್ದು ದೇವಿಯ ದರ್ಶನ ಪಡೆದರು.


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ