Breaking News

ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಸೇನೆಯ ಕರ್ನಲ್, ಮೇಜರ್ ಸೇರಿ ಮೂವರು ಹುತಾತ್ಮ

Spread the love

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಸೇನೆಯ ಮೇಜರ್, ಕರ್ನಲ್​ ಹಾಗೂ ಡಿಎಸ್​​ಪಿ ಉಗ್ರರ ದಾಳಿಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಪೊಲೀಸರು, ಅನಂತ್​ನಾಗ್​ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಕರ್ನಲ್ ಮತ್ತು ಮೇಜರ್ ಹಾಗೂ ಡಿಎಸ್​ಪಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಕಮಾಂಡಿಂಗ್ ರಾಷ್ಟ್ರೀಯ ರೈಫಲ್ಸ್ ಯೂನಿಟ್ ಮತ್ತು ಮೇಜರ್ ಅನಂತ್​ನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಆಫ್-ವೆಟ್ 19 ಆರ್‌ಆರ್‌ಗೆ ಕಮಾಂಡರ್ ಆಗಿದ್ದರು ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ