Breaking News

ವಿಜಯಪುರದಲ್ಲಿ ನಾಟಕ ಪ್ರದರ್ಶನದ ವೇಳೆ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿ

Spread the love

ವಿಜಯಪುರ: ನಾಟಕ ಪ್ರದರ್ಶನದ ವೇಳೆ ದಿಢೀರ್​ ಕುಸಿದು ಬಿದ್ದು ಪೋಸ್ಟ್​​ಮ್ಯಾನ್ ಸಾವನ್ನಪ್ಪಿರುವ ಮನಕಲಕುವ ಘಟನೆ ಗುರುವಾರ ರಾತ್ರಿ ನಡೆದಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಶರಣು ಬಾಗಲಕೋಟೆ (24) ಎಂಬುವರೆ ಹೃದಯಾಘಾತದಿಂದ ಸಾವನ್ನಪ್ಪಿದ ಪೋಸ್ಟ್​​ಮ್ಯಾನ್ ಆಗಿದ್ದಾರೆ.

ನಾಟಕ ಪ್ರದರ್ಶನ ವೇಳೆ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ಕೊಟ್ಯಾಳ್​ಗೆ ಹೃದಯಾಘಾತವಾಗಿದೆ. ”ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ” ನಾಟಕ ಪ್ರದರ್ಶನ ವೇಳೆ ಈ ಘಟನೆ ನಡೆದಿದೆ. ಕೇವಲ 24 ವರ್ಷದ ಶರಣು ಬಾಗಲಕೋಟೆ ಇತ್ತೀಚೆಗೆ ಪೋಸ್ಟ್​​ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಗ್ರಾಮ ದೇವರ ಜಾತ್ರೆ ಹಿನ್ನೆಲೆ ನಾಟಕ ಹಮ್ಮಿಕೊಂಡಿದ್ದು, ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ ತಾನು ಸಹ ನಾಟಕದಲ್ಲಿ ಡಾನ್ಸ್ ಮಾಡಲು ವೇದಿಕೆ ಏರಿದ್ದ ಶರಣು ವಿಧಿಯಾಟಕ್ಕೆ ಪ್ರಾಣ ಕಳೆದುಕೊಂಡಿದ್ದಾನೆ. ಈ ಸಂಬಂಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಸಹಜ ಸಾವು ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ