Breaking News

10 ವರ್ಷದಲ್ಲಿ ಮೋದಿ‌ ದೇಶವನ್ನು ದಿವಾಳಿ ಮಾಡಿದ್ದಾರೆ: ಸಚಿವ ಸಂತೋಷ್ ಲಾಡ್

Spread the love

ಧಾರವಾಡ : ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್​ ಪ್ರತಿಕ್ರಿಯಿಸಿದ್ದು, ಸಿಎಂ ಅವರಿಗೆ ಎಲ್ಲವೂ ಮಾಹಿತಿ ಇದೆ.

ನಾವು ತಡೆ ಹಿಡಿಯಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು ಎಂದು ಸಚಿವ ಲಾಡ್ ಹೇಳಿದರು.

ಈ‌ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಷ್ಟು ನೀರು ಬಿಡಬೇಕು ಎಂಬುದರ ಬಗ್ಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳುತ್ತೆ. ಬಂದ್ ವೇಳೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಮನವಿ ಮಾಡಿಕೊಂಡರು. ನಾಳೆ ಜನತಾ ದರ್ಶನ ಹಿನ್ನೆಲೆಯಲ್ಲಿ ಸಿಎಂ ಆದೇಶದ ಮೇರೆಗೆ ಜನತಾ ದರ್ಶನವನ್ನು ಎಲ್ಲ ಜಿಲ್ಲೆಗಳಲ್ಲಿ ಮಾಡಲಾಗುತ್ತಿದೆ ಎಂದರು.

ಲೋಕಸಭಾ ಚುನಾವಣೆ ವಿಚಾರ ಕುರಿತಂತೆ ಮಾತನಾಡಿದ ಸಚಿವರು, ಮೋದಿ‌ ಅವರು 10 ವರ್ಷದಲ್ಲಿ ದೇಶವನ್ನು ದಿವಾಳಿ ಮಾಡಿದ್ದಾರೆ. ಅದೇ ಬೇಸ್​ನಲ್ಲಿ ನಾವು ಈ ಬಾರಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ. 10 ವರ್ಷದಿಂದ ಒಂದೇ ಒಂದು ಯೋಜನೆ ಇಲ್ಲ. ಆ ಬಗ್ಗೆ ಇವತ್ತಿಗೂ ಏನೂ ಮಾತನಾಡಲ್ಲ. ಅದರ ಬದಲಾಗಿ ಮೊದಲು 5 ಕೋಟಿ ಇಂಟರ್​ನೆಟ್ ಬಳಕೆ ಮಾಡುತ್ತಿದ್ದರು. ಈಗ 20 ಕೋಟಿ ಜನ ಇಂಟರ್​ನೆಟ್ ಬಳಕೆ ಮಾಡುತ್ತಾರೆ. ಮೊದಲು 6 ಕೋಟಿ ಮೊಬೈಲ್ ಬಳಕೆ ಮಾಡುತ್ತಿದ್ದರು. ಈಗ 40 ಕೋಟಿ ಮೊಬೈಲ್ ಬಳಕೆ ಮಾಡುತ್ತಾರೆ ಅಂತಾರೆ. ಆದ್ರೆ ಇವೆಲ್ಲ ಸರ್ಕಾರದ ಕಾರ್ಯಕ್ರಮಗಳು ಅಲ್ಲ ಎಂದು ತಿಳಿಸಿದರು.10 ವರ್ಷದಲ್ಲಿ ಮಾಡಿರುವ ಕಾರ್ಯಕ್ರಮದ ಬಗ್ಗೆ ಮಾಹಿತಿ ಕೊಡಬೇಕು. ಇವತ್ತು ಕೇಂದ್ರ ಸರ್ಕಾರ ಬಂದು ಕಾರ್ಯಕ್ರಮಗಳ ಬಗ್ಗೆ ಹೇಳಬೇಕು. ಯಾರೆ ಪ್ರಧಾನಿ ಆದ್ರೂ ಜಿಡಿಪಿ ಹೆಚ್ಚು ಆಗೇ ಆಗುತ್ತೆ. ಅವರಿಗೆ ಅನೂಕೂಲವಾದುದನ್ನು ಮಾತ್ರ ಮಾತನಾಡುತ್ತಾರೆ. ಪ್ರಧಾನಿ ಮೋದಿ 10 ವರ್ಷದಲ್ಲಿ ಕೇವಲ ಪ್ರಚಾರವನ್ನು ಗಿಟ್ಟಿಸಿಕೊಂಡಿದ್ದಾರೆ. ಕಳೆದ 10 ವರ್ಷದಲ್ಲಿ ಸುಮಾರು 20 ಕೋಟಿ ಜನ ಬಿಪಿಎಲ್ ಕಾರ್ಡ್​ನಲ್ಲಿ ಸೇರಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಸಣ್ಣ ಕೈಗಾರಿಕೆಗಳ ಕಡೆ ಗಮನ ಹರಿಸಿದ್ದಾರೆ. ನಮ್ಮ‌ ವಸ್ತುಗಳನ್ನು ಬೇರೆ ಯಾವುದೇ ಅಂಗಡಿಯಲ್ಲಿಡೋದು, ಅವುಗಳನ್ನು ಮತ್ತೆ ನಮಗೆ ಹೆಚ್ಚಳವಾಗಿ ಅವರು ಮಾರಾಟ ಮಾಡುತ್ತಾರೆ ಎಂದು ಸಚಿವ ಲಾಡ್​ ಹೇಳಿದ್ರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ