Breaking News

ಸದ್ಯದಲ್ಲೇ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ : B.S.Y.

Spread the love

ಬೆಂಗಳೂರು : ಜೆಡಿಎಸ್ ಪಕ್ಷವು ಎನ್​​ಡಿಎ ಮೈತ್ರಿಕೂಟ ಸೇರುವ ಮೂಲಕ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಉಭಯ ಪಕ್ಷಗಳು ಒಟ್ಟಾಗಿ ಹೋಗಬೇಕಿದೆ.

ಹಾಗಾಗಿ ಸದ್ಯದಲ್ಲೇ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಆಗಿದ್ದರು. ಈ ಭೇಟಿಯಲ್ಲಿ ವಿಶೇಷತೆ ಏನಿಲ್ಲ, ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು ಅಷ್ಟೇ. ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದಿದ್ದಾರೆ. ಸದ್ಯದಲ್ಲೇ ಕುಮಾರಸ್ವಾಮಿ ಅವರ ಮನೆಗೆ ಹೋಗಿ ಮಾತನಾಡಿಸಿಕೊಂಡು ಬರುತ್ತೇನೆ. ಹೇಗೂ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ಹಾಗಾಗಿ ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದರು.

ಇದೇ ವೇಳೆ ಮೈತ್ರಿ ವಿಚಾರದ ಕುರಿತು ಮುಂದಿನ ಮಾತುಕತೆ ನಡೆಸಲು ಹೈಕಮಾಂಡ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಅಂತಹ ಆಲೋಚನೆ ಇಲ್ಲ ಎಂದು ತಿಳಿಸಿದರು.

ಪಾಲಿಟಿಕ್ಸ್ ಕೇವಲ ಮ್ಯಾಥ್ಸ್ ಅಲ್ಲ ಕೆಮಿಸ್ಟ್ರಿ ಕೂಡ : ರಾಜಕಾರಣ ಎಂಬುದು ಬರೀ ಮ್ಯಾಥಮೆಟಿಕ್ಸ್ ಅಲ್ಲ, ಅದರಲ್ಲಿ ಕೆಮಿಸ್ಟ್ರಿ ಕೂಡ ಇರುತ್ತದೆ ಎಂದು ಮಾಜಿ ಸಚಿವ ಸಿ ಟಿ ರವಿ ಜೆಡಿಎಸ್ ಜೊತೆಗಿನ ಮೈತ್ರಿಯನ್ನು ವಿಶ್ಲೇಷಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಭಾಗ ಆಗಿರುವುದನ್ನು ನಾವು ಸ್ವಾಗತ ಮಾಡಿದ್ದೇವೆ. ಉಳಿದ ಸಂಗತಿಗಳ ಬಗ್ಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ತೀರ್ಮಾನ ಮಾಡಬೇಕಿದೆ. ಇದರ ಜೊತೆಗೆ ಉಳಿದ ಸಂಗತಿಗಳ ಬಗ್ಗೆ ನಾವು ಕುಳಿತು ಯೋಚನೆ ಮಾಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ