Breaking News

ಬೆಳಗಾವಿ: ಲಾರಿ-ಕ್ರೂಸರ್ ನಡುವೆ ಡಿಕ್ಕಿ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

Spread the love

ಬೆಳಗಾವಿ : ಸೆಪ್ಟೆಂಬರ್ 15ರಂದು ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದವರಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದರು.

ಇವತ್ತು ಮತ್ತೆ ಬಸವರಾಜ್ ಗಿರಿಮಲ್ಲ ಆಜೂರ (32) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಆಜೂರ್ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡು ಸ್ವ ಗ್ರಾಮಕ್ಕೆ ಆಗಮಿಸುವ ವೇಳೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿಯ ಕಡಪ-ಚಿತ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಸ್ಥಳದಲ್ಲೇ ಐವರು ಮೃತರಪಟ್ಟಿದ್ದರು. 11 ಜನರಿಗೆ ತೀವ್ರ ಗಾಯಗಳಾಗಿದ್ದವು. ಬಳಿಕ ಗಾಯಾಳುಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಸ್ತೂರಿ ಶೇಖರ ಆಜೂರ (35) ಆ ದಿನದಂದೇ ಸಾವನ್ನಪ್ಪಿದ್ದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ