Breaking News

ಕಾವೇರಿ ವಿಚಾರ ಬಂದ್ರೆ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿಲ್ಲ – ಹೆಚ್ ಡಿ ದೇವೇಗೌಡ ಬೇಸರ

Spread the love

ಹಾಸನ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ರಾಜ್ಯದಲ್ಲಿ ಇಂದು ಬಂದ್​​ಗೆ ಕರೆ ನೀಡಿದ್ದರೂ, ನಮ್ಮಲ್ಲಿ ಒಗ್ಗಟ್ಟಿಲ್ಲ. ಇದು ನಮ್ಮ ರಾಜ್ಯದಲ್ಲಿರುವ ಸ್ಥಿತಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದರು.

ಕಾವೇರಿ ನೀರು ಬಿಡದಂತೆ ಬೆಂಗಳೂರು ಬಂದ್​ಗೆ ಸಂಬಂಧಿಸಿದಂತೆ ನಗರದ ಸಂಸದರ ನಿವಾಸದಲ್ಲಿ ಕರ್ನಾಟಕ ಬಂದ್ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಮಾತನಾಡಿದ ಅವರು, ಕೆಲವರು ಇಂದು ಬಂದ್ ಮಾಡಿದ್ದಾರೆ. ಇನ್ನೂ ಕೆಲವರು ಶುಕ್ರವಾರ ಮಾಡ್ತಾರಂತೆ ಮತ್ತೆ ಕೆಲವರು ವಿಧಾನಸೌಧ ಮುತ್ತಿಗೆ ಹಾಕ್ತಾರಂತೆ. ಇದೇ ನಮ್ಮ ಕರ್ನಾಟಕ ಎಂದು ನಸುನಕ್ಕ ದೇವೇಗೌಡರು ನಮ್ಮಲ್ಲಿ ಒಗ್ಗಟ್ಟು ಇಲ್ಲ ಎಂದು ಪರೋಕ್ಷವಾಗಿ ಹೇಳಿ ಬೇಸರ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ವತ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ನೀರು ಎಷ್ಡಿದೆ ಎಂದು ವಿವರ ತಂದಿದ್ದಾರೆ. ಬಳಿಕ ಮತ್ತೆ ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ನಿಷ್ಪಕ್ಷಪಾತವಾಗಿ ಎರಡು ರಾಜ್ಯಗಳ ಸ್ಥಿತಿ ಅಧ್ಯಯನ ಮಾಡಲು ತಜ್ಞರ ಸಮಿತಿ ಕಳಿಸಿ ಎಂದು ಆ ಪತ್ರದಲ್ಲಿ ಕೇಳಿದ್ದೇನೆ. ನಾನು ಬರೆದ ಪತ್ರದ ಸಾರಾಂಶದ ಬಗ್ಗೆ ಸಿಎಂ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬೊಮ್ಮಾಯಿ ಸೇರಿದಂತೆ ಹಿರಿಯ ಮುಖಂಡರು ಎಲ್ಲರೂ ಸ್ವಾಗತ ಮಾಡಿದ್ದಾರೆ ಎಂದು ಹೇಳಿದರು.

ನಮ್ಮ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಅಗತ್ಯ: ನಮ್ಮ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಬೇಕು. ಹಾಗಾಗಿ ಆ ಬೆಳೆ ಉಳಿಸೋಕೆ ಇವರಿಂದ ಆಗಲ್ಲ. ಮತ್ತೆ ಸಿಡಬ್ಲುಆರ್​​ಸಿ ತೀರ್ಪು ಬಗ್ಗೆ ಸರ್ಕಾರದ ನಿಲುವು ಇನ್ನೂ ಗೊತ್ತಿಲ್ಲ. ನಾನು ಹಿರಿಯ ರಾಜಕಾರಣಿ ಆಗಿ ನಮ್ಮಲ್ಲಿ ಐಕ್ಯತೆ ಇಲ್ಲ ಎಂದು ಹಲವಾರು ಬಾರಿ ಹೇಳಿದ್ದೇನೆ. ತಮಿಳುನಾಡಿನ ಪರಿಸ್ಥಿತಿ ಬೇರೆ ಇದೆ. ಈ ವಿಚಾರದಲ್ಲಿ ಸರ್ಕಾರದ ನಿಲುವು ಬಂದ ಮೇಲೆ ನಾವು ನಮ್ಮ ಪಕ್ಷ ಪ್ರತಿಕ್ರಿಯೆ ನೀಡುತ್ತೇವೆ ಎಂದು ತಿಳಿಸಿದರು.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ