Breaking News
Home / ಜಿಲ್ಲೆ / ಬೆಂಗಳೂರು / ಕರ್ನಾಟಕದಲ್ಲಿ ‘ಸಂಡೆ ಲಾಕ್‌ಡೌನ್‌’ ಹೇಗಿತ್ತು..? ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಅಪ್ಡೇಟ್ಸ್

ಕರ್ನಾಟಕದಲ್ಲಿ ‘ಸಂಡೆ ಲಾಕ್‌ಡೌನ್‌’ ಹೇಗಿತ್ತು..? ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಅಪ್ಡೇಟ್ಸ್

Spread the love

ಬೆಂಗಳೂರು : ದಿನದಿಂದ ದಿನಕ್ಕೆ ಮಹಾ ಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವ
ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಧಿಸಿದ್ದ ಲಾಕ್ ಡೌನ್ ಗೆ ರಾಜ್ಯದೆಲ್ಲೆಡೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ಯವಾಗಿದೆ. ಇಂದು ಬೆಳಗಿನಿಂದಲೇ ಸಾರ್ವಜನಿಕ ಸ್ಥಳಗಳಲ್ಲಿ ಜನಸಂಚಾರವಿಲ್ಲದಂತಾಗಿದ್ದು, ಎಲ್ಲೆಡೆ ಅಘೋಷಿತ ಬಂದ್ ವಾತವರಣ ನಿರ್ಮಾಣವಾಗಿದೆ.

ಬೆಳಗ್ಗೆನಿಂದಲೇ ಜನರು ಸ್ಬಯಂಪ್ರೇರಿತರಾಗಿ ತಮಗೆ ತಾವೇ ನಿರ್ಬಂಧ ಹಾಕಿಕೊಂಡು ಯಾರೊಬ್ಬರೂ ಮನೆಯಿಂದ ಆಚೆ ಬಾರದೆ ಕೊರೋನಾ ಸೋಂಕು ತಡೆಗಟ್ಟಲು ಸರ್ಕಾರದ ಜೊತೆ ನಾವು ಇದ್ದೇವೆ ಎಂಬ ಸಂದೇಶವನ್ನು ಸಾರಿದರು.

ವಿವಿಧ ಜಿಲ್ಲೆಗಳಲ್ಲಿಯೂ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಕರ್ಫ್ಯೂಗೆ ಜನರು ಸಹಕಾರ ನೀಡುತ್ತಿದ್ದಾರೆ. ಅನಗತ್ಯ ಓಡಾಟಕ್ಕೆ ತಡೆ ಬಿದ್ದಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಬೆಳಗ್ಗೆ 9 ಗಂಟೆವರೆಗೆ ಹಾಲು ಮಾರಾಟ ಕೇಂದ್ರ ಹಾಗೂ ಕೆಲ‌ ಅಂಗಡಿಗಳು ಮಾತ್ರ ತೆರೆದಿದ್ದವು.

ಉಳಿದಂತೆ ಹೋಟೆಲ್, ಹಣ್ಣು-ತರಕಾರಿ ಮಾರುಕಟ್ಟೆ, ಹೂ ಮಾರಾಟ ಬಂದ್ ಆಗಿದೆ. ಬಸ್ ಸಂಚಾರ ಸಹ ಸ್ಥಗಿತವಾಗಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ. ಬಸ್, ಆಟೋ, ರೈಲು ಸೇರಿದಂತೆ ಯಾವುದೇ ಸಾರಿಗೆ ಸಂಚಾರವಿಲ್ಲ. ಖಾಸಗಿ ವಾಹನದಲ್ಲಿಯೂ ಜನರು ಅನಗತ್ಯವಾಗಿ ತಿರುಗಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಿ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳಾದ ಔಷಧ, ಹಾಲು, ಪತ್ರಿಕೆ, ಸರ್ಕಾರಿ ಆಸ್ಪತ್ರೆಗಳ ಸೇವೆಗಳು ಲಭ್ಯವಿವೆ‌.ಪಟ್ರೋಲ್ ಬಂಕ್ ಗಳು ಎಂದಿನಿಂತೆ ಕಾರ್ಯನಿರ್ವಹಿಸುತ್ತಿವೆ. ಇವಿಷ್ಟು ಬಿಟ್ಟರೆ ರಾಜ್ಯದಲ್ಲಿ ಬೇರಾವುದೇ ಸೇವೆಗಳು ಲಭ್ಯವಿಲ್ಲ.
ಎಲ್ಲಾ ರೀತಿಯ ಸಂಸ್ಥೆಗಳು ಹಾಗೂ ಸಂಘಟನೆಗಳು ಈ ಆಂದೋಲನಕ್ಕೆ ಸ್ವಯಂ ಪ್ರೇರಿತವಾಗಿ ಬೆಂಬಲ ವ್ಯಕ್ತರಪಡಿಸಿದ್ದು

ಹಾಲು, ಪತ್ರಿಕೆ, ಹೂ ಖರೀದಿಗೆ ಮನೆಯಿಂದ ಹೊರಗೆ ಬಂದಿದ್ದ ಜನತೆ 7 ಗಂಟೆ ಹೊತ್ತಿಗೆ ಮನೆ ಸೇರಿಕೊಂಡರು.
ಕೆಎಸ್ಆರ್’ಟಿಸಿ, ಸಂಚಾರ ಸಂಪೂರ್ಣವಾಗಿ ಬಂದ್ ಆಗಿವೆ. ಖಾಸಗಿ ಬಸ್ಸು,ಆಟೋ, ಟ್ಯಾಕ್ಸಿ, ಕ್ಯಾಬ್ ಮಾಲೀಕರು ಕರ್ಫೂಗೆ ಬೆಂಬಲ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಖಾಸಗಿ ವಾಹನಗಳ ಸಂಚಾರಗಳೂ ಬಂದ್ ಆಗಿದ್ದವು.

ಇದರಂತೆ ಶಾಲಾ, ಕಾಲೇಜುಗಳಿಗೆ ಸರ್ಕಾರವೇ ತಾತ್ಕಾಲಿಕ ಬಂದ್ ಮಾಡಿದೆ. ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಚಿತ್ರಮಂದಿರಗಳು ಕೂಡ ಬಂದ್ ಮಾಡಲಾಗಿತ್ತು.ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ರಸ್ತೆಯ‌ ಪ್ರತಿಯೊಂದು ಕಡೆ ಚೆಕ್​ಪೋಸ್ಟ್​ಗಳನ್ನ ನಿರ್ಮಾಣ ಮಾಡಿ, ವಾಹನ ತಪಾಸಣೆ ನಡೆಸಲಾಗುತ್ತಿದೆ.

ಒಂದು ವೇಳೆ ಜನರು ಅನಗತ್ಯವಾಗಿ ಓಡಾಡಿದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ (ಎನ್​ಡಿಎಂಎ) ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ. ಅಗತ್ಯ ಸಾಮಗ್ರಿ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿಯೊಂದು ವ್ಯಾಪ್ತಿಯಲ್ಲಿ ಡಿಸಿಪಿಗಳು ಕಣ್ಗಾವಲು ಇಟ್ಟಿದ್ದರು.

ಒಂದು ವೇಳೆ ಯಾರಾದರೂ ಅನಗತ್ಯವಾಗಿ ಹೊರಗೆ ಬಂದರೆ ಲಾಠಿ‌ ರುಚಿ ತೋರಿಸಲು ಕೂಡ ಪೊಲೀಸರು ಸಿದ್ಧರಾಗಿದ್ದಾರೆ. ಹೀಗಾಗಿ‌ ಬೆಂಗಳೂರಿನಾದ್ಯಂತ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, ಇನ್ಸ್ಪೆಕ್ಟರ್​, ಸಬ್ ಇನ್ಸ್ಪೆಕ್ಟರ್, ಹೊಯ್ಸಳ ಗಸ್ತು ತಿರುಗುತ್ತಿದ್ದಾರೆ.

ಬೆಳಗ್ಗಿನ ವಾಕಿಂಗ್‌ಗೆ ಪಾರ್ಕ್‌ಗೆ ಬಂದವರನ್ನು ಪೊಲೀಸರು ವಾಪಸ್ ಕಳಿಸಿದರು. ನಗರದ ರಸ್ತೆಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದು ಅನಗತ್ಯವಾಗಿ ಓಡಾಡುವ ಜನರಿಗೆ ಎಚ್ಚರಿಕೆ ನೀಡಿದರು.ಬಿಎಂಟಿಸಿ ಬಸ್, ಆಟೋಗಳ ಸಂಚಾರ ಸ್ಥಗಿತಗೊಂಡಿದೆ. ಶಿವಾಜಿನಗರ, ಕೆ. ಆರ್. ಮಾರ್ಕೆಟ್‌ನಲ್ಲಿ ಜನರಿಲ್ಲ. ಎಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ.

ಇದೇ ರೀತಿ ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ‌ಹಾಸನ, ತುಮಕೂರು ,ಚಿತ್ರದುರ್ಗ,ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಧಾರವಾಡ, ಬೆಳಗಾವಿ, ಕಲಬುರಗಿ, ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜನರ ದೈನಂದಿನ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಂಬಗೊಂಡಿದ್ದವು.

ಬಹುತೇಕ ಕಡೆ ಜನರು ತಮ್ಮ ಅಗತ್ಯ ವಸ್ತುಗಳನ್ನು ನಿನ್ನೆಯೇ ಖರೀದಿ ಮಾಡಿದ್ದರು. ಇಂದು ಮುಂಜಾನೆ 7ಗಂಟೆಯೊಳಗೆ ಹಾಲು, ಹಣ್ಣು, ತರಕಾರಿ ಸೇರಿದಂತೆ ಮತ್ತಿತರ ವಸ್ತುಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ಸದಾ ಗ್ರಾಹಕರು ಮತ್ತು ವ್ಯಾಪಾರಿಗಳಿಂದ ತುಂಬಿರುತ್ತಿದ್ದ ತರಕಾರಿ ಮಾರುಕಟ್ಟೆ ಜನರಿಲ್ಲದೇ ಬಿಕೋ ಎನ್ನುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ಅಪರೂಪವಾಗಿದೆ. ಹೋಟೆಲ್, ಟೀ ಅಂಗಡಿ ಯಾವುದೂ ತೆರೆಯದ ಕಾರಣ ಕೆಲವರು ಬೆಳಗ್ಗೆ ಪರದಾಡಿದರು.

ಇನ್ನು ಬೀದಿ ಬದಿ ವ್ಯಾಪಾರಿಗಳು ಕೂಡ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿದ್ದು, ವ್ಯಾಪಾರ, ವಹಿವಾಟು ನಡೆಯುತ್ತಿರುವುದು ಎಲ್ಲಿಯೂ ಕಂಡು ಬಂದಿಲ್ಲ. ಸ್ವಯಂ ಪ್ರೇರಿತರಾಗಿ ಮನೆ ಬಿಟ್ಟು ತೆರಳುತ್ತಿಲ್ಲ. ವ್ಯಾಪಾರಸ್ಥರು ಕೂಡ ಅಂಗಡಿ ಮುಂಗಟ್ಟು ಮುಂಚಿದ್ದಾರೆ.

ಪ್ರತಿನಿತ್ಯ ಜನಸಂದಣಿಯಿಂದ ತುಂಬಿ ತುಳುಕುತ್ತಿದ್ದ ಸಾಂಸ್ಕೃತಿಕ ನಗರಿ ಮೈಸೂರಿನ ಅರಸು ರಸ್ತೆಗಳಾದ ಸಯ್ಯಾಜೀರಾವ್ ರಸ್ತೆ ಡಿ.ದೇವರಾಜು ಅರಸು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿವೆ. ಎಲ್ಲೆಡೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿ ಆಟೋ ರಿಕ್ಷಾ, ಟ್ಯಾಕ್ಸಿ, ಕ್ಯಾಬ್ ಸೇವೆ ಸ್ಥಗಿತಗೊಂಡಿದ್ದವು.

ಇನ್ನು ಭಾನುವಾರವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಖಾಸಗಿ ಕಚೇರಿಗಳೂ ಕೂಡ ಕಾರ್ಯನಿರ್ವಹಿಸುತ್ತಿಲ್ಲ. ಬಹುತೇಕ ಖಾಸಗಿ ಕೈಗಾರಿಕೆಗಳು, ಗಾರ್ಮೆಂಟ್ಸ್ ಸೇರಿದಂತೆ ಎಲ್ಲಾ ಕಾರ್ಖಾನೆಗಳೂ ಕೂಡ ಬಂದ್ ಆಗಿದ್ದವು. ಖಾಸಗಿ ಆಸ್ಪತ್ರೆಗಳೂ ಆಂದೋಲನ ಬೆಂಬಲಿಸಿ ಒಪಿಡಿ ಬಂದ್ ಮಾಡುವುದಾಗಿ ಘೋಷಿಸಿವೆ. ಆದರೆ, ತುರ್ತುಸೇವೆಗಳು ಲಭ್ಯವಿರುತ್ತದೆ ಎಂದು ಭಾರತೀಯ ವೈದ್ಯ ಸಂಘದ ರಾಜ್ಯ ಘಟಕ ಮಾಹಿತಿ ನೀಡಿದೆ.

ಸಕ್ಕರೆ ನಾಡು ಮಂಡ್ಯದಲ್ಲಿ ಮನೆಯಿಂದ ಜನರು ಹೊರಬಾರದ ಬೆಂಬಲ ಸೂಚಿಸಿದರು.ಯಾವುದೇ ರೀತಿಯ ವಾಹನಗಳು ಇಲ್ಲದ ಕಾರಣ, ಮೈ-ಬೆಂ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು.ಬಿಕೋ ಎನ್ನುತ್ತಿರುವ ದೃಶ್ಯಗಳು
ಕಂಡು ಬಂದಿತು.

ರಾಜ್ಯಾದ್ಯಂತ ಲಾಜ್ ಡೌನ್ ಪೇಡಾನಗರಿ ಧಾರವಾಡ ಜಿಲ್ಲೆಯಲ್ಲಿ ಕರ್ಫ್ಯೂಗೆ ಭಾನುವಾರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನಗರದ ವೃತ್ತ, ಸಿಬಿಟಿ, ಕೋರ್ಟ್ ವೃತ್ತ ಹಾಗೂ ಸುತ್ತಲಿನ ಪ್ರದೇಶಗಳು ಸಂಪೂರ್ಣ ಸ್ತಬ್ಧವಾಗಿವೆ. ಅಗತ್ಯ ಸೇವೆಗಳ ಹೊರತುಪಡಿಸಿ ಎಲ್ಲವೂ ಬಂದ್ ಆಗಿವೆ.

ನಗರದ ಸ್ವಚ್ಛತೆಗೆ ಎಂದಿನಂತೆ ಸೇವೆಗಿಳಿದಿರುವ ಪೌರಕಾರ್ಮಿಕರು ವಿವಿಧ ತಂಡ ರಚನೆ ಮಾಡಿಕೊಂಡು ಸ್ವಚ್ಚತಾ ಕಾರ್ಯ ಮಾಡಿದರು. ಜೊತೆಗೆ ನಗರದೆಲ್ಲೆಡೆ ರೋಗನಿಯಂತ್ರಕ ಪೌಡರ್ ಸಿಂಪಡಣೆ ಮಾಡುತ್ತಿದ್ದಾರೆ. ಆಟೋ, ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ನಗರ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿವೆ.

ದೇಶದಲ್ಲೇ ಮೊದಲ ಕೊರೊನಾ ಸಾವಿನಿಂದ ತಲ್ಲಣಗೊಂಡಿದ್ದ ಕಲಬುರ್ಗಿ ಭಾನುವಾರ ಸಂಪೂರ್ಣ ಸ್ತಬ್ಧಗೊಂಡಿದೆ. ಬೆಳಿಗ್ಗೆ ಏಳು ಗಂಟೆಯಿಂದಲೇ ಜನರ ಓಡಾಟ ಸಂಪೂರ್ಣ ನಿಂತು ಹೋಗಿದೆ. ಅಚ್ಚರಿಯ ಸಂಗತಿ ಎಂದರೆ ನಗರದ ಯಾವುದೇ ಮುಖ್ಯರಸ್ತೆ ಅದಕ್ಕೆ ಅಂಟ್ಕೊಂಡ ಪ್ರಮುಖ ರಸ್ತೆ ಮತ್ತು ಓಣಿಗಳ ಒಳಗಿನ ಸಣ್ಣ ಸಣ್ಣ ರಸ್ತೆಗಳಲ್ಲೂ ಕೂಡ ಜನ ಸಂಚಾರ ಸಂಪೂರ್ಣ ನಿಂತು ಹೋಗಿದೆ.

ಬೆಳಗ್ಗೆ ಏಳು ಗಂಟೆಯವರೆಗೆ ಅವಶ್ಯಕ ವಸ್ತುಗಳನ್ನು ಜನರು ತುಂಬಾ ಲಗುಬಗೆಯಿಂದ ಖರೀದಿ ಮಾಡಿ ಏಳು ಗಂಟೆಯ ಹೊತ್ತಿಗೆ ಜನ ಮನೆ ಸೇರಿಕೊಂಡಿದ್ದಾರೆ. ಕರ್ಫ್ಯೂ ಸಂಪೂರ್ಣ ಯಶಸ್ವಿಯಾಗಿದೆ.ಕಳೆದೆರಡು ದಿನಗಳ ಹಿಂದಿನ ಕರ್ಫ್ಯೂ ಪರಿಸರಕ್ಕೂ ಇಂದಿನ ಭಾನುವಾರದ ಕರ್ಫ್ಯೂ ಪರಿಸರಕ್ಕೂ ಅಜಗಜಾಂತರ ವ್ಯತ್ಯಾಸವಿದ್ದು ಜನರು ಅಭೂತಪೂರ್ವವಾಗಿ ಬೆಂಬಲ ನೀಡಿ ಕೊರೊನಾ ವೈರಸ್ ಹರಡದಂತೆ ನೋಡಿಕೊಳ್ಳುವಲ್ಲಿ ಜಿಲ್ಲಡಳಿತದ ಜೊತೆ ತಾವು ಮುಂದಿದ್ದೇವೆ ಎಂದು ತೋರಿಸಿಕೊಟ್ಟಿದ್ದಾರೆ.

ಹಾವೇರಿಯಲ್ಲಿ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಆರೋಗ್ಯ ಸೇವೆ ಮಾತ್ರ ಲಭ್ಯವಿತ್ತು.ಇನ್ನುಹೊಟೇಲ್​ಗಳನ್ನು ತೆರದಿರಲಿಲ್ಲ. ಪ್ರಮುಖವಾಗಿ ಸಾರಿಗೆ ಸಂಚಾರವು ಸಂಪೂರ್ಣ ಸ್ತಬ್ಧವಾಗಿದ್ದು ಸಾರಿಗೆ ಬಸ್, ಆಟೋಗಳು ರಸ್ತೆಗಿಳಿಯಲಿಲ್ಲ.

ತಾಲೂಕು, ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕೆಲ ಪ್ರಯಾಣಿಕರು ಬಸ್, ಆಟೋಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂತಾದರೂ, ಕಿಲ್ಲರ್ ಕೊರೋನಾ ವಿರುದ್ಧ ಸಮರ ಸಾರಲು ಹಾವೇರಿ ಜನತೆ ತೊಡೆ ತಟ್ಟಿ ನಿಂತಿದ್ದಾರೆ.
ಇದರ ಜೊತೆ ಹಾವೇರಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಲ್ಲಿರುವುದರಿಂದ ಎಲ್ಲವು ಸ್ತಬ್ಧವಾಗಿದೆ.

ಇನ್ನೂ ಕೊಡಗು ಜಿಲ್ಲೆಯಲ್ಲೂ ರಸ್ತೆಗೆ ಇಳಿಯದ ಕೆಎಸ್ಆರ್​ಟಿಸಿ ಬಸ್, ಆಟೋಗಳು. ಸಂಪೂರ್ಣ ಬಂದ್ ಆಗಿದ್ದವು.ಮೆಡಿಕಲ್, ಪೆಟ್ರೋಲ್ ಬಂಕ್ಗಳು ಕೂಡ ಬಂದ್ ಆಗಿವೆ. ಒಟ್ಟಾರೆ ಜನತಾ ಕರ್ಫ್ಯೂಗೆ ಕೊಡಗಿನಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಜನತಾ ಕರ್ಫ್ಯೂಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಐತಿಹಾಸಿಕ ಬಾದಾಮಿಯಲ್ಲಿ ರಸ್ತೆಗಳೆಲ್ಲವೂ ಬಿಕೋ ಎನ್ನಿತ್ತವೆ.

ವಾಹನಗಳು. ಸ್ವಯಂ ಪ್ರೇರಿತವಾಗಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಕರೆ ನೀಡಿರುವ ಬಂದ್ ಉದ್ದೇಶವನ್ನು ಅರ್ಥ ಮಾಡಿಕೊಂಡ ಜನತೆ ಮನೆಯಿಂದ ಹೊರ ಬರುತ್ತಿಲ್ಲ. ಇಡೀ ದಿನ ಮನೆಯಲ್ಲಿಯೇ ಇರಲು ತೀರ್ಮಾನಿಸಿರುವುದು ಸ್ಪಷ್ಟವಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ