Breaking News

ಬಿಜೆಪಿ ಅವಧಿಯಲ್ಲಿ ಸಾವಿರಾರು ಕೋಮುಗಲಭೆ ಪ್ರಕರಣ ಕೈಬಿಡಲಾಗಿದೆ: ಡಿ.ಕೆ.ಶಿವಕುಮಾರ್‌

Spread the love

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೋಮು ವಿವಾದಕ್ಕೆ ಸಂಬಂಧಿಸಿದ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಸಾವಿರಾರು ರೌಡಿಶೀಟರ್‌ಗಳನ್ನೂ ಬೀದಿಗೆ ಬಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.

 

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರಿಗೆ ತಮ್ಮ ಮನೆಯ ಹುಳುಕು, ದೋಸೆ ತೂತು ಕಾಣುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ ಎಂದು ತಿಳಿದುಕೊಂಡಿದ್ದಾರೆ. ಹೀಗಾಗಿ ಜನ ಅವರನ್ನು ಎಲ್ಲಿ ಕೂರಿಸಬೇಕೋ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ. ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ಮಾಧುಸ್ವಾಮಿ ಸೇರಿದಂತೆ ಅನೇಕರು ಮನವಿ ಮಾಡಿದ್ದರು. 2023ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ 7,361 ರೌಡಿಶೀಟರ್‌ಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದೇ ಬಿಜೆಪಿ ಸರ್ಕಾರ. ಅವರು ಈಗ ನಮಗೆ ಬುದ್ಧಿ ಹೇಳಲು ಬರುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಅವರ ಕಾರ್ಯಕರ್ತರ ಪರವಾಗಿ ರಾಜಕಾರಣ ಮಾಡಿದ್ದಾರೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಅಮಾಯಕರ ವಿರುದ್ಧ ಇರುವ ಪ್ರಕರಣಗಳನ್ನು ಮಾತ್ರ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಮಾಡಲು ಅವಕಾಶವಿದ್ದರೆ ಮಾಡಬಹುದು ಎಂದು ಅಧಿಕಾರಿಗಳು ಶಿಫಾರಸು ಮಾಡುತ್ತಾರೆ. ಇದಕ್ಕೆಂದೇ ಸಮಿತಿ ಇದೆ. ಅವರು ವರದಿ ನೀಡಿದ ಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆತುರದಲ್ಲಿದೆಯೇ ಎಂಬ ಪ್ರಶ್ನೆಗೆ, ನನ್ನ ಮೇಲೂ ಸಾಕಷ್ಟು ಪ್ರಕರಣಗಳಿವೆ, ಈಗಲೂ ಅನೇಕ ಪ್ರಕರಣಗಳು ಚಾಲ್ತಿಯಲ್ಲಿವೆ. ಅನೇಕ ಪ್ರಕರಣಗಳನ್ನು ರಾಜಕೀಯ ಉದ್ದೇಶಕ್ಕೆ ಹಾಕಲಾಗಿದೆ. ಪ್ರಕರಣ ಹಿಂಪಡೆಯಲು ನಮಗೇನೂ ಅವಸರ ಇಲ್ಲ, ಬಿಜೆಪಿಯವರೇ ತರಾತುರಿಯಲ್ಲಿ ಇದ್ದಾರೆ. ನೀವು (ಮಾಧ್ಯಮದವರು) ಅವರನ್ನು ಪ್ರತಿದಿನ ತೋರಿಸುತ್ತಿದ್ದೀರಿ. ಅದಕ್ಕೆ ಅವರು ಆ ರೀತಿ ಹೇಳುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ