Breaking News

ಬೆಳಗಾವಿ: ಜಮೀನಿಗೆ ತೆರಳಿದ್ದ ರೈತ ಕರಡಿ ದಾಳಿಗೆ ಬಲಿ

Spread the love

ಬೆಳಗಾವಿ: ಕರಡಿ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ಘೋಶೆ (ಬಿಕೆ) ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಘೋಶೆ (ಬಿಕೆ) ಗ್ರಾಮದ ರೈತ ಭಿಕಾಜಿ ಈರಪ್ಪ ಮಿರಾಶಿ(63) ಎಂದು ಗುರುತಿಸಲಾಗಿದೆ.

 

ಶನಿವಾರ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ರೈತ ಭಿಕಾಜಿ ಮೇಲೆ ಕರಡಿ ದಾಳಿ ನಡೆಸಿತ್ತು. ಈ ವೇಳೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಕರಡಿಯನ್ನು ಓಡಿಸಲು ಯತ್ನಿಸಿದ್ದರು. ಆದರೆ, ಕರಡಿ ದಾಳಿಯನ್ನು ಮುಂದುವರೆಸಿ ರೈತನನ್ನು ಸುಮಾರು 2 ಕಿಮೀ ಕಾಡಿನೊಳಗೆ ಎಳೆದುಕೊಂಡು ಹೋಗಿದೆ. ಬಳಿಕ ಮೃತದೇಹ ಅರಣ್ಯ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ‌.

ಕರಡಿ ದಾಳಿಯಿಂದಾಗಿ ಗ್ರಾಮಸ್ಥರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಸಂಬಂಧ ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜೊತೆಗೆ ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಖಾನಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ