Breaking News

ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು.
ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು,
ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲ ಕೆಲಸ- ಕಾರ್ಯಗಳನ್ನು ಮಾಡುವಂತೆ ಸೂಚಿಸಿದರು.
ಬರುವ 2025 ಕ್ಕೆ ಮಹಾಲಕ್ಷ್ಮೀ ದೇವಿಯ ಜಾತ್ರೆಯು ನಿಗದಿಯಾಗಿದೆ. ಅತೀ ಸಡಗರ,ಸಂಭ್ರಮ,
ಅದ್ದೂರಿಯಾಗಿ
ಜಾತ್ರೆಯನ್ನು ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ದೇವಸ್ಥಾನಗಳ ಅಭಿವೃದ್ಧಿ ಕೆಲಸಗಳು ಸರಾಗವಾಗಿ ನಡೆಯಬೇಕಾಗಿದೆ.
ಬರುವ ಅ. 15 ರಿಂದ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳನ್ನು ಆರಂಭಿಸಬೇಕು.
ದಿ.20 ರಿಂದ ದೇವಸ್ಥಾನದ ಜೀರ್ಣೋದ್ಧಾರದ ವಂತಿಗೆಯನ್ನು ಜಾತ್ರಾ ಕಮೀಟಿಯವರು ಸಂಗ್ರಹ ಮಾಡಬೇಕು. ಮೊದಲು ಹಾಲುಮತದ ಸಮಾಜದ ಐವರಿಂದ ವಂತಿಗೆಯನ್ನು ಸ್ವೀಕರಿಸುವ ಮೂಲಕ ವಂತಿಗೆಗೆ ಚಾಲನೆ ನೀಡಬೇಕೆಂದು ಅವರು ಹೇಳಿದರು. ದೇವಸ್ಥಾನದ ಎರಡು ದೊಡ್ಡದಾದ ಹೊಸ ರಥಗಳನ್ನು ನಿರ್ಮಿಸುವಂತೆಯೂ ಅವರು ಕಮೀಟಿಯವರಿಗೆ ಸೂಚನೆ ನೀಡಿದರು.
ಅಂದಾಜು 6.50 ಕೋಟಿ ರೂಪಾಯಿ ವೆಚ್ಚವನ್ನು ಜಾತ್ರೆಗೆ ಹಣವನ್ನು ಸಂಗ್ರಹಿಸಬೇಕಾಗಿದೆ. ಇದನ್ನು ಸಾರ್ವಜನಿಕ ಮೂಲಗಳಿಂದ ವಂತಿಗೆ ಮೂಲಕ ಪಡೆಯಬೇಕಾಗಿದೆ. ಅಲ್ಲದೇ ಎರಡೂ ಮಹಾಲಕ್ಷ್ಮೀ
ದೇವಸ್ಥಾನಗಳನ್ನು ಜಾತ್ರೆಗೂ ಮುನ್ನವೇ ಜೀರ್ಣೋದ್ಧಾರ ಕಾರ್ಯಗಳನ್ನು ಮಾಡಬೇಕಾಗಿದೆ. 2024 ರ ಡಿಸೆಂಬರ್ ತಿಂಗಳ ಅಂತ್ಯದೊಳಗೆ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳನ್ನು ಯಾವುದೇ ಪರಿಸ್ಥಿತಿಯಲ್ಲಿ ಮುಗಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಮೀಟಿ ಸದಸ್ಯರು ಹೆಚ್ಚಿನ ಮುತುವರ್ಜೀ ವಹಿಸಿ ಕೆಲಸವನ್ನು ಮಾಡುವಂತೆ ಅವರು ಸೂಚಿಸಿದರು.
ಎಲ್ಲ ಹಂತದ ಜನಪ್ರತಿನಿಧಿಗಳು, ಉದ್ದಿಮೆದಾರರು, ವ್ಯಾಪಾರಸ್ಥರು,ಅಂಗಡಿಕಾರರು, ವಿವಿಧ ಸಮುದಾಯದ ಪ್ರತಿಷ್ಠಿತರನ್ನು ಭೇಟಿ ಮಾಡಿ ದೇಣಿಗೆ ಹಣವನ್ನು ಸಂಗ್ರಹ ಮಾಡಬೇಕು. ಯಾರೂ ಎಷ್ಟೇ ದೇಣಿಗೆ ನೀಡಿದರೂ ಅದನ್ನು ಮುಕ್ತ ಮನಸ್ಸಿನಿಂದ ಪ್ರೀತಿಯಿಂದ ಸ್ವೀಕರಿಸುವಂತೆಯೂ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಾತ್ರಾ ಕಮೀಟಿಯ ಉಪಾಧ್ಯಕ್ಷ ಅಶೋಕ ಮುಲ್ಕಿ ಪಾಟೀಲ, ಪ್ರಭು ಚೌವ್ಹಾಣ,ಅಶೋಕ ತುಕ್ಕಾರ, ಅಶೋಕ ಹೆಗ್ಗಣ್ಣವರ, ಅಡಿವೆಪ್ಪ ಕಿತ್ತೂರ, ಬಸವಣ್ಣಿ ಬನ್ನಿ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ