Breaking News

ಕಿತ್ತೂರು ಉತ್ಸವ: ಪ್ರಚಾರ ಸಮಿತಿ ಸಭೆ

Spread the love

ಕಿತ್ತೂರು ಉತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ವ್ಯಾಪಕ ಪ್ರಚಾರವನ್ನು ಕೈಗೊಳ್ಳುವುದರ ಜತೆಗೆ ಕಳೆದ ಬಾರಿಯಂತೆ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ನೇರಪ್ರಸಾರ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಿತ್ತೂರು ಉತ್ಸವ ಪ್ರಚಾರ ಉಪ ಸಮಿತಿ ಅಧ್ಯಕ್ಷರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹೇಳಿದರು.

ಕಿತ್ತೂರ ಉತ್ಸವ-2023 ರ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನ ಪ್ರವಾಸಿಮಂದಿರದಲ್ಲಿ ಶುಕ್ರವಾರ(ಅ.13) ನಡೆದ ಪ್ರಚಾರ ಉಪ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ಸವಕ್ಕೆ ಸಂಬಂಧಿಸಿದಂತೆ ಪ್ರತಿವರ್ಷದಂತೆ ಉತ್ಸವ ಸಮಿತಿಯು ಒದಗಿಸುವ ಬ್ಯಾನರ್, ಹೋರ್ಡಿಂಗ್ ಅಳವಡಿಕೆ; ಕರಪತ್ರಗಳು, ಗೋಡೆ ಪೋಸ್ಟರ್ ಮತ್ತಿತರ ಪ್ರಚಾರಸಾಮಗ್ರಿಗಳನ್ನು ಬಳಸಿಕೊಂಡು ಹೆಚ್ಚಿನಮಟ್ಟದಲ್ಲಿ ಪ್ರಚಾರ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಪ್ದಚಾರ ಸಮಿತಿ ಸದಸ್ಯರಾದ ನಾಗರಾಜ ಜೋರಾಪುರ, ಉತ್ಸವದ ಪ್ರಮುಖ ಆಕರ್ಷಣೆ ಹಾಗೂ ಕಾರ್ಯಕ್ರಮಗಳ ಕುರಿತು ಕಿರು ವಿಡಿಯೋ ತುಣುಕಗಳನ್ನು ಸಿದ್ಧಪಡಿಸಿ ಸಾಮಾಜಿಕ‌ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ