Breaking News

ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷ………

Spread the love

ಬೆಳಗಾವಿ : ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದರಿಂದ ಜನರು ಆಂತಕಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಮರಿ ತಾಯಿ ಹುಡುಕಾಟದಲ್ಲಿದ್ದಾರೆ.

ಬೆಳಿಗ್ಗೆ ಯುವಕರು ಶಿವಗೊಂಡ ಅಂಗಡಿ ನದಿಗೆ ಈಜಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಬಳಿಕ 2 ಮರಿಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ ಹನುಮಂತ ಹನ್ನಮಣ್ಣವರ ಮೊಸಳೆ ಮರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರವಾಹ ಸಂದರ್ಭದಲ್ಲಿ ಜಿಲ್ಲೆಯ ಕೆಲವೊಂದು ಪ್ರಮುಖ ನದಿಗಳಲ್ಲಿ ಮೊಸಳೆಗಳು ಕಂಡು ಬರುತ್ತಿವೆ. ಜನರು ಆತಂಕಕ್ಕೆ ಒಳಗಾಗಬಾರದು. ಇಲಾಖೆಯಿಂದ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಜನರು ಸಹ ನದಿಗೆ ಇಳಿಯುವಾಗ ಎಚ್ಚರಿಕೆಯಿಂದ ಇಳಿಯಬೇಕು. ಮೊಸಳೆ ತಾಯಿ ಇರಬಹುದು ಎಂಬ ಅನುಮಾನ ಇರುವುದರಿಂದ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

Spread the loveಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ