Breaking News

ಗೋಕಾಕ್ ತಾಲೂಕಿನ ಬೆಣಚಿನಮರಡಿ ಇಳಿ ವಯಸ್ಸಿನಲ್ಲಿರುವ ಈ ಕಲಾವಿದನಿಗೆ ಬೇಕಿದೆ ಸರ್ಕಾರದ ನೆರವು

Spread the love

ಬೆಳಗಾವಿ: ಇವರು 45ಕ್ಕೂ ಹೆಚ್ಚು ಪ್ರಾಣಿ, ಪಕ್ಷಿಗಳ ಧ್ವನಿ ಅನುಕರಣೆ ಮಾಡುತ್ತಾರೆ. 81ರ ವಯಸ್ಸಿನಲ್ಲೂ ಕುಗ್ಗಿಲ್ಲ ಇವರ ಉತ್ಸಾಹ. ಆದರೆ ಇಷ್ಟೆಲ್ಲಾ ಕಲೆ ಇದ್ದರೂ ತಪ್ಪಿಲ್ಲ ಸಂಕಷ್ಟ. ಇಳಿ ವಯಸ್ಸಿನಲ್ಲಿರುವ ಈ ಕಲಾವಿದನಿಗೆ ಬೇಕಿದೆ ಸರ್ಕಾರದ ನೆರವು ಮತ್ತು ಪ್ರೋತ್ಸಾಹ. ಬಡ ಕಲಾವಿದನ ಕುರಿತಾದ ಕರುಣಾಜ‌ನಕ ಸ್ಟೋರಿ ಇಲ್ಲಿದೆ..

ಹೌದು, ಇವರ ಹೆಸರು ಸಿದ್ದಪ್ಪ ಉದ್ದಪ್ಪ ಖಿಲಾರಿ. ಊರು ಗೋಕಾಕ್ ತಾಲೂಕಿನ ಬೆಣಚಿನಮರಡಿ. ಹುಟ್ಟು ಕಲಾವಿದ ಆಗಿರುವ ಸಿದ್ದಪ್ಪ ಪ್ರಾಣಿ ಪಕ್ಷಿಗಳ ಧ್ವನಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಚಿಕ್ಕ ವಯಸ್ಸಿನಿಂದ ಕಲಾ ಸೇವೆಗೈಯುತ್ತಿರುವ ಇವರು ಪುತ್ರನ ಜೊತೆಗೆ ಮುರಕಲು ಮನೆಯಲ್ಲೇ ವಾಸ ಆಗಿರೋದು ನೋಡಿದರೆ, ಎಂತವರ ಕರಳು ಕೂಡ ಚುರಕ್ ಎನ್ನದೇ ಇರಲು ಸಾಧ್ಯವಿಲ್ಲ. ಅವರಿದ್ದ ಮನೆ ಯಾವ ಕ್ಷಣದಲ್ಲಾದರೂ ಬೀಳುವ ಸ್ಥಿತಿಯಲ್ಲಿದೆ. ಆದರೂ ಸರ್ಕಾರ ಮತ್ತು ಜಿಲ್ಲಾಡಳಿತ ಈ ಹಿರಿಯ ಕಲಾವಿದನ ನೆರವಿಗೆ ಇದುವರೆಗೂ ಬಂದಿಲ್ಲ.

ಅನುಕರಣೆಯಿಂದ ಕಲಾವಿದನಾದ ಸಿದ್ದಪ್ಪ.. ಆರಂಭದಲ್ಲಿ ಕೇವಲ ಮೂರು ಪ್ರಾಣಿಗಳ ಧ್ವನಿ ಅನುಕರಣೆ ಮಾಡುತ್ತಿದ್ದ ಸಿದ್ದಪ್ಪ ಅವರು ಇಂದು 45ಕ್ಕೂ ಅಧಿಕ ಪ್ರಾಣಿ, ಪಕ್ಷಿಗಳನ್ನು ಅನುಕರಿಸುತ್ತಾರೆ. ಕುರಿ, ಕೋಳಿ, ಹಸು, ನಾಯಿ ಬೆಕ್ಕು, ಕಾಡು ಕೋಣ, ಕಪ್ಪೆ, ಚಿಕ್ಕ ಮಗು ಅಳುವುದು, ಹೋರಿ, ಹಸು, ಕೋಗಿಲೆ, ಕಪ್ಪೆ ಸೇರಿ ಬಹುತೇಕ ಎಲ್ಲ ಪ್ರಾಣಿ, ಪಕ್ಷಿಗಳಂತೆಯೇ ಕೂಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇನ್ನು ವಿಮಾನ ಹಾರಾಟವನ್ನೂ ಅನುಕರಿಸುತ್ತಾರೆ. ಹಳ್ಳಿಯಿಂದ ದಿಲ್ಲಿಯವರೆಗೂ ಹೋಗಿ ತಮ್ಮ ಕಲೆ ಪ್ರದರ್ಶಿಸಿ ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ. ಸತೀಶ ಶುಗರ್ಸ್ ಅವಾರ್ಡ್ ಸೇರಿ ಜಿಲ್ಲೆಯಲ್ಲಿ ಆಯೋಜಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಿದ್ದಪ್ಪ‌ ಹಾಜರಿ ಇದ್ದೇ ಇರುತ್ತದೆ. ಬರಿಗಾಲ ಫಕೀರನಂತಿರುವ ಸಿದ್ದಪ್ಪ ಆಯೋಜಕರು ಕೊಡುವ ಅಷ್ಟೋ ಇಷ್ಟು ಹಣದಿಂದ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ.

 


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ