Breaking News

ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ ಟ್ಯಾಕ್ಸ್​​ಗೆ ಸೇರಿದ್ದು”:H.D.K.

Spread the love

ಮೈಸೂರು: ಬೆಂಗಳೂರಿನ ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ (ಡಿ ಕೆ.ಶಿವಕುಮಾರ್, ಸುರೇಶ್ ಟ್ಯಾಕ್ಸ್) ಟ್ಯಾಕ್ಸ್​​ಗೆ ಸೇರಿದ್ದಾಗಿದೆ.

ಈ ಮೂಲಕ ರಾಜ್ಯದಲ್ಲಿ ಹೊಸ ಕಲೆಕ್ಷನ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇಂದು ಕುಟುಂಬ ಸಮೇತ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ‘ರಾಜ್ಯದಲ್ಲಿ ಕೃಷಿ ವಲಯ ಸೇರಿದಂತೆ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಾಡಿನ ಜನತೆಗೆ ತಾಯಿಯ ಆಶಿರ್ವಾದ ಸಿಗಲಿ ಎಂಬುದು ನನ್ನ ಪ್ರಾರ್ಥನೆ’ ಎಂದರು.

“ರಾಜ್ಯದಲ್ಲಿ ಈಗ ಎಸ್​ಎಸ್​ಟಿ ಟ್ಯಾಕ್ಸ್ ಆರಂಭವಾಗಿದೆ”: ‘ರಾಜ್ಯದಲ್ಲಿ ಈ ಹಿಂದೆ ವೈಎಸ್​ಟಿ ಟ್ಯಾಕ್ಸ್ ಆರಂಭವಾಗಿತ್ತು, ಇದೀಗ ಅದಾದ ನಂತರ ಎಸ್​ಎಸ್​ಟಿ ಟ್ಯಾಕ್ಸ್ ಎಂಬ ಹೊಸ ಕಲೆಕ್ಷನ್ ಆರಂಭವಾಗಿದೆ. ಬೆಂಗಳೂರಿನ ಅಂಬಿಕಾಪತಿ ಮನೆಯ ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ ಟ್ಯಾಕ್ಸ್​ಗೆ ಸೇರಿದ್ದಾಗಿದ್ದು, ಸಂತೋಷ್ ಮನೆಯಲ್ಲಿ ಸಿಕ್ಕಿದ್ದು ವೈಎಸ್​ಟಿ ಟ್ಯಾಕ್ಸ್ ಹಣ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರಾಮಾಣಿಕತೆ ತೋರಬೇಕು. ಭ್ರಷ್ಟಾಚಾರ ಮಾಡಿ ದೇವರ ಮುಂದೆ ಕೈ ಮುಗಿದರೆ ದೇವಿ ಕ್ಷಮಿಸೋದಿಲ್ಲ. ಲೂಟಿ ಮಾಡುವವರು ತಿಹಾರ್ ಜೈಲಿಗೆ ಹೋಗುವುದು ತಪ್ಪುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಭ್ರಷ್ಟಾಚಾರ ಮಾಡಲು ಇಲಾಖೆಗಳು ಪೈಪೋಟಿಗೆ ಬಿದ್ದಿವೆ. ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಈಗ ಹಣ ಪತ್ತೆಯಾಗಿರುವುದಕ್ಕಿಂತ ಸಾಕ್ಷಿ ಬೇಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ