Breaking News

ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ: ಪೊಲೀಸ್​ ಭಾತ್ಮೀದಾರನ ಸಹಿತ ಐವರ ಬಂಧನ

Spread the love

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಿಸಿ 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪೊಲೀಸ್ ಭಾತ್ಮೀದಾರನ ಸಹಿತ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು.

ಪೊಲೀಸ್ ಭಾತ್ಮೀದಾರನಿಂದಲೇ ಅಪಹರಣದ ಸಂಚು: ಸಿಸಿಬಿ ಪೊಲೀಸರ ಭಾತ್ಮೀದಾರನಾಗಿದ್ದ ಮೊಹಮ್ಮದ್​ ಖಾಸಿಂ ಮುಜಾಹಿದ್, ಸಿಸಿಬಿ ಕಚೇರಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಸೆಪ್ಟೆಂಬರ್ 2 ರಂದು ಕಾಲು ಸಿಂಗ್ ಎಂಬಾತ ತನ್ನ ಕಾರಿನಲ್ಲಿ ಬರುತ್ತಿದ್ದಾಗ ವಿ.ವಿ. ಪುರಂ ಬಳಿ ಆರೋಪಿ ಮತ್ತವನ ಟೀಂ ಆತನನ್ನು ಅಡ್ಡಗಟ್ಟಿ ಸುತ್ತುವರೆದಿತ್ತು.

ನಂತರ ‘ನಾವು ಸಿಸಿಬಿ ಪೊಲೀಸರು’ ಎನ್ನುತ್ತ ಕಾಲು ಸಿಂಗ್​ನನ್ನು ಕಾರಿನ ಹಿಂಬದಿ ಸೀಟ್​ನಲ್ಲಿ ಕೂರಿಸಿ, ನೀನು ಗಾಂಜಾ ಸರಬರಾಜುದಾರ ಎಂಬ ಮಾಹಿತಿಯಿದೆ ಎಂದು ಆತನ ಕಣ್ಣಿಗೆ ಬಟ್ಟೆ ಕಟ್ಟಿ ವಿಲ್ಸನ್ ಗಾರ್ಡನ್​ನ ಮನೆಯೊಂದಕ್ಕೆ ಕರೆದೊಯ್ದಿದ್ದರು. ಮನೆಯಲ್ಲಿ ಕಾಲು ಸಿಂಗ್​ಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ, ಆತನ ಮೊಬೈಲ್​ನಿಂದ ಆತನ ಸ್ನೇಹಿತನಿಗೆ ಫೋನ್ ಮಾಡಿ ‘ನಾವು ಸಿಸಿಬಿ ಪೊಲೀಸರು’ ಎಂದು ಐದು ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು.

ಈ ವೇಳೆ ಕಾಲು ಸಿಂಗ್ ಸ್ನೇಹಿತರು ಪರಿಚಿತ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತಕ್ಷಣ ಸಿಸಿಬಿ ಪೊಲೀಸರಿಗೆ ವಿಷಯ ರವಾನೆಯಾಗಿದೆ ಎಂಬುದನ್ನು ಅರಿತ ಆರೋಪಿಗಳು ಕಾಲು ಸಿಂಗ್​ನ ಬಿಟ್ಟು ಕಳುಹಿಸಿದ್ದರು. ಇದಾದ ನಂತರ ಕಾಲು ಸಿಂಗ್ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದಾಗ ಆರೋಪಿಗಳ ಮುಖವಾಡ ಬಯಲಾಗಿದೆ. ಸದ್ಯ ಆರೋಪಿಗಳಾದ ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಘಟನೆ ಸಂಬಂಧ ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ