Breaking News

ಚೆನ್ನೈನ ಅವಡಿ ಬಳಿ ಹಳಿ ತಪ್ಪಿದ ವಿದ್ಯುತ್ ಚಾಲಿತ​ ರೈಲು: ತಪ್ಪಿದ ಭಾರಿ ದುರಂತ

Spread the love

ಚೆನ್ನೈ (ತಮಿಳುನಾಡು): ಇಂದು ಬೆಳಗ್ಗೆ ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ.

ಅದೃಷ್ಟವಶಾತ್​ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ತಿರುವಳ್ಳೂರಿನಿಂದ ಪುರಟ್ಚಿ ತಲೈವರ್​ ಡಾ. ಎಂಜಿಆರ್​ ಸೆಂಟ್ರಲ್​ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್​) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) ಬೆಳಗ್ಗೆ ತಿರುವಳ್ಳೂರಿನಿಂದ ತಿರುಟ್ಟಣಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್​ ರೈಲು ಅಣ್ಣನೂರಿನಿಂದ ಅವಡಿ ತಲುಪಿದ ಬಳಿಕ ಅವಘಡ ಸಂಭವಿಸಿದೆ. ಈ ರೈಲಿನಲ್ಲಿ 4 ಬೋಗಿಗಳು ಹಳಿ ತಪ್ಪಿವೆ.

ಇಂದು ರಜಾದಿನವಾದ ಕಾರಣ ರೈಲು ನಿಲ್ದಾಣದಲ್ಲಿ ಜನಸಂದಣಿ ಕಡಿಮೆಯಾಗಿತ್ತು. ಅದೃಷ್ಟವಶಾತ್​ ರೈಲಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಅವಘಡದಿಂದಾಗಿ ಅವಡಿ -ಚೆನ್ನೈ ಮಾರ್ಗವಾಗಿ ತೆರಳುವ ರೈಲುಗಳು, ವಂದೇ ಭಾರತ್​ ಸೇರಿದಂತೆ ಇತರ ಎಲೆಕ್ಟ್ರಿಕ್​ ರೈಲುಗಳು, ಒಟ್ಟಾರೆಯಾಗಿ ರೈಲು ಸೇವೆಗಳ ಸಂಚಾರಕ್ಕೆ ತೊಂದರೆಯಾಗಿದೆ.

ಸದ್ಯ ರೈಲು ಭೋಗಿಗಳ ತೆರವು ಕಾರ್ಯಾಚರಣೆಯನ್ನು ರೈಲ್ವೆ ಇಲಾಖೆ ಕೈಗೊಂಡಿದೆ. ಈ ಅವಘಡಕ್ಕೆ ಚಾಲಕನ ಅಜಾಗರೂಕತೆ ಅಥವಾ ಸಿಗ್ನಲ್​ ವೈಫಲ್ಯ ಕಾರಣವೇ? ಎಂದು ರೈಲ್ವೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ