Breaking News
Home / ಜಿಲ್ಲೆ / ಬಾಗಲಕೋಟೆ / ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

Spread the love

ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ಮಹಿಳೆಯರು ಮಾದರಿಯಾಗಿದ್ದಾರೆ.

ಇವರ ಸಾಧನೆಯ ಫಲ ಎಂಬಂತೆ ಇದೀಗ ಕೇಂದ್ರ ಸರ್ಕಾರ 5 ಕೋಟಿ ರೂಪಾಯಿ ಅನುದಾನ ನೀಡಿ ಬೃಹತ್ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ.

ಹೌದು.. ಪರಿಸರಸ್ನೇಹಿ ಬ್ಯಾಗ್​ ತಯಾರಿಕೆ ಮೂಲಕ ಬಾಗಲಕೋಟೆ ವನಿತೆಯರು ರಾಜ್ಯವಲ್ಲದೇ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲೂ ಯಶಸ್ವಿಯಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿರುವ ಪಂಚಾಯತ್​ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದ ಕಾರ್ಯವನ್ನು ಮೆಚ್ಚಿ ಕೇಂದ್ರ ಸರ್ಕಾರ ಬ್ಯಾಗ್​ ಕ್ಲಸ್ಟರ್ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಈ ಮೂಲಕ ಜಿಲ್ಲೆಯ ಸಾವಿರಾರು ಸಂಖ್ಯೆಯ ಮಹಿಳೆಯರಿಗೆ ಉದ್ಯೋಗ ಸಿಗಲಿದ್ದು, ದೇಶಕ್ಕೆ ಇವರ ಸಾಧನೆ ಮಾದರಿ ಆಗಿದೆ.

ಗ್ರಾಮದ ಸುತ್ತಮುತ್ತಲಿನಲ್ಲಿ ಈಗಾಗಲೇ ಸುಮಾರು 114 ಮಹಿಳಾ ಸ್ವ ಸಹಾಯ ಸಂಘಗಳು ನೋಂದಣಿ ಆಗಿದ್ದು, ಮಹಿಳಾ ಒಕ್ಕೂಟದಡಿ ಸ್ವಾವಲಂಬನೆ ಉದ್ಯೋಗ ಮಾಡುತ್ತಿದ್ದಾರೆ. ಕೇವಲ ಒಂದು ಸಂಘದಿಂದ ಪ್ರಾರಂಭವಾದದ್ದು, ಈಗ ಸಾವಿರಾರು ಮಹಿಳೆಯರು ಸ್ವ-ಉದ್ಯೋಗ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಿದ್ದಾರೆ. ಮೊದಲು 5 ಲಕ್ಷ ರೂಪಾಯಿಗಳ ಸರ್ಕಾರದ ಸಹಾಯಧನ ಪಡೆದ ಈ ಮಹಿಳೆಯರು ನಂತರ ಕೇಂದ್ರ ಸರ್ಕಾರದಿಂದ 21 ಲಕ್ಷ ರೂಪಾಯಿಗಳ ಸಹಾಯಧನ ಪಡೆದರು. ಅದೇ ಉತ್ಸಾಹ, ಶ್ರಮದಿಂದ ಈಗ ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಸಿ, ಲಾಭದಾಯಕವನ್ನಾಗಿಸಿದ್ದಾರೆ. ಪ್ರತಿ ಮಹಿಳಾ ಘಟಕದವರಿಗೂ ಕಡಿಮೆ ಬಡ್ಡಿದರದಲ್ಲಿ ಸಾಲ‌ ನೀಡಿ, ಸ್ವ-ಉದ್ಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಪ್ಲಾಸ್ಟಿಕ್​ರಹಿತ ಬ್ಯಾಗ್​ ತಯಾರಿಕೆ.. ಪ್ಲಾಸ್ಟಿಕ್ ಬಳಕೆ ಇಲ್ಲದೆ ಗುಳೇದಗುಡ್ಡ ಖಣದಿಂದ ವಿವಿಧ ಬಗೆಯ ಆಕರ್ಷಕ ಬ್ಯಾಗ್ ತಯಾರಿಸುತ್ತಾರೆ. ರಾಜ್ಯ ಅಷ್ಟೇ ಅಲ್ಲದೇ ದೇಶದ ವಿವಿಧ ಪ್ರದೇಶದಲ್ಲಿ ನಡೆಯುವ ಮೇಳ‌ದಲ್ಲಿ ಈ ಮಹಿಳೆಯರು ಭಾಗವಹಿಸಿ ತಮ್ಮ ಕಲೆಯನ್ನು ಪಸರಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಡೆದ ಸರಸ್​ ಮೇಳದಲ್ಲಿ ಪಾಲ್ಗೊಂಡು ಬಹುಮಾನ ಪಡೆದಿದ್ದಾರೆ. ಮಹಿಳಾ ದಿನಾಚರಣೆ ಸಮಯದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇವರ ಕೆಲಸ ಕಾರ್ಯಗಳನ್ನು ಮೆಚ್ಚಿ ಕೇಂದ್ರ ಸರ್ಕಾರದ ಅಧಿಕಾರಿಗಳು ಈ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ