Breaking News

ರಮೇಶ ಜಾರಕಿಹೊಳಿಯವರ ಪ್ರವಾಸದ ವಿವರ…….ಮೇ.27ರಿಂದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ

Spread the love

ಬೆಳಗಾವಿ: ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಮೇ.27ರಿಂದ ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮೇ.27ರಂದು ಬೆಳಿಗ್ಗೆ9.30ಕ್ಕೆ ಗೋಕಾಕ್ ನಿರ್ಗಮನ, 10.30ಕ್ಕೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಆಹ್ವಾಲ ಸ್ವೀಕಾರ, ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯಿಂದ ಮೈಸೂರಿಗೆ ತೆರಳಿ ವಾಸವ್ಯ.

ಮೇ .28ರಂದು ಬೆಳಿಗ್ಗೆ 8ಗಂಟೆಗೆ ಸುತ್ತೂರು ಮಹಾಸಂಸ್ಥಾನದ ಸ್ವಾಮಿಜೀಯೊಂದಿಗೆ ಮಾತುಕತೆ, 9 ಗಂಟಗೆ ಗಣಪತಿ ಸಚ್ಛಿದಾನಂದ ಆಶ್ರಮಕ್ಕೆ ಭೇಟಿ, 11.30ಕ್ಕೆ ಮೈಸೂರಿಂದ ಹೊರಟು 12.30ಕ್ಕೆ ಕಬಿನಿ ಜಲಾಶಯ ಪರಿವೀಕ್ಷಣೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಿದ್ದಾರೆ. ಬಳಿಕ ಅಲ್ಲಿಂದ 2.30ಕ್ಕೆ ಹೊರಟು 3.30ರಿಂದ 4.30ರವರೆಗೆ ಜಲಸಂಪನ್ಮೂಲ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ 7 ಗಂಟೆಗೆ ಬಿಜೆಪಿ ಹಿರಿಯ ನಾಯಕ ಚಾಮರಾಜನಗರ ಲೋಕಸಭಾ ಸದಸ್ಯ ಶ್ರಿನಿವಾಸ್ ಪ್ರಸಾದ್ ಭೇಟಿ ಮಾಡಲಿದ್ದಾರೆ. ಮೈಸೂರಲ್ಲಿ ವಾಸ್ತವ್ಯ.

ಮೇ.29ರಂದು ಬೆಳಿಗ್ಗೆ 9.30ಕ್ಕೆ ನಿರ್ಗಮನ, 10 ಗಂಟೆಗೆ ಸುತ್ತೂರು ಏತ ನೀರಾವರಿ ಯೋಜನೆ-1 ಪರೀವಿಕ್ಷಣೆ, 12.30ಕ್ಕೆ ಸರಗುರ್-ಗುಂಡಾಲ್ ಏತ ನೀರಾವರಿ ಯೋಜನೆಯ ಹೆಡ್ ವರ್ಕ್ಸ್ ಕಾಮಾಗಾರಿ ವೀಕ್ಷಣೆ,1.30ಕ್ಕೆ ಗುಂಡಾಲ್ ಜಾಲಶಯಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.


Spread the love

About Laxminews 24x7

Check Also

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

Spread the love ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ