Breaking News

ರಾಜ್ಯೋತ್ಸವಕ್ಕೆ ರಜೆ ಹಾಕಿ ಬೆಂಗಳೂರಿನಿಂದ ಬಂದ ಪೊಲೀಸ್

Spread the love

ಬೆಳಗಾವಿ : ನವೆಂಬರ್ 1 ರಂದು ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತದೆ.

ಇಲ್ಲಿನ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿ ರಾಜ್ಯದ ನಾನಾ ಮೂಲೆಗಳಿಂದ‌ ಕನ್ನಡಿಗರು ಬರುತ್ತಿದ್ದಾರೆ. ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್​ ಅಧಿಕಾರಿಯೊಬ್ಬರು ರಜೆ ಹಾಕಿ ಬಂದಿರುವುದು ವಿಶೇಷವಾಗಿದೆ.

ಕಳೆದ 10 ವರ್ಷಗಳಿಂದ ತಪ್ಪದೇ ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಈ ವಿಶೇಷ ಕನ್ನಡ ಅಭಿಮಾನಿ ಅಮಿತ್ ರಾಮಚಂದ್ರ ಮಿರಜಕರ್ ಎಂಬುವವರು ಮೂಲತಃ ಬೆಳಗಾವಿ ಅವರೇ ಆಗಿದ್ದಾರೆ. ಅವರು ತನ್ನ‌ 8 ತಿಂಗಳ ಪುಟ್ಟ ಕಂದಮ್ಮ ಐಸಿರಿ ಮತ್ತು ತಾಯಿ ಗೀತಾ ಜೊತೆಗೆ ಆಗಮಿಸಿದ್ದಾರೆ. ಇವರ ಕುಟುಂಸ್ಥರು ಅಪ್ಪಟ್ಟ ಕನ್ನಡ ಅಭಿಮಾನಿಗಳಾಗಿದ್ದು, ರಾಜ್ಯೋತ್ಸವಕ್ಕೆ ಒಂದು ದಿನ‌ ಮೊದಲೇ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಇಲ್ಲಿನ ಹಬ್ಬದ ವಾತಾವರಣ ಕಂಡು ಹರ್ಷಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ