Breaking News

ಉನ್ನತ ಹುದ್ದೆಗಳನ್ನು ಅಲಕಂರಿಸಿರುವವರು ಅತ್ಯಂತ ಇತಿಮಿತಿಯಲ್ಲಿ ಮಾತನಾಡಬೇಕು: ಹೈಕೋರ್ಟ್

Spread the love

ಬೆಂಗಳೂರು: ಪ್ರಾದೇಶಿಕ ಭಾಷೆ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರು ಅಸಮರ್ಥರು ಎಂದು ಭಾವಿಸಬಾರದು.

ಪ್ರಾದೇಶಿ ಭಾಷೆಯಲ್ಲಿ ಶಿಕ್ಷಣ ಪಡೆದವರೂ ಯಶಸ್ವಿಯಾಗಬಹುದು. ಆದರೆ, ಈ ಸಮಸ್ಯೆಗಳನ್ನು ಕಾನೂನು ಅಂಶಗಳಲ್ಲಿ ಪರಿಗಣಿಸಬೇಕು ಎಂದಿರುವ ಹೈಕೋರ್ಟ್, ಈ ವಿಚಾರದಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ತಿಳಿಸಿದೆ.

ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಗೆ ಪಠ್ಯ ಕ್ರಮಕ್ಕೆ ಕನ್ನಡ ಭಾಷೆ ಬೋಧನೆ ಕಡ್ಡಾಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಎಂಟು ಮಂದಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆಭಿಪ್ರಾಯಪಟ್ಟಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು, ನಾನೂ ಸಹಾ ಪ್ರಾದೇಶಿ ಭಾಷೆಯಲ್ಲಿ ಅಧ್ಯಯನ ಮಾಡಿದ್ದೇನೆ. ನನ್ನ ಸಾಧನೆಗೆ ಎಂದಿಗೂ ಭಾಷೆ ಅಡ್ಡಿಯಾಗಲಿಲ್ಲ. ಆದರೂ ನ್ಯಾಯಾಲಯ ಕಾನೂನಿನ ಅಂಶಗಳಡಿಯಲ್ಲಿ ಪರಿಗಣಿಸಿ ಪರಿಹಾರ ಕಂಡುಕೊಳ್ಳಬೇಕು. ಜೊತೆಗೆ, ಈ ರೀತಿಯ ವಿಚಾರಗಳಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ